Webdunia - Bharat's app for daily news and videos

Install App

ಫೆಬ್ರವರಿಯಲ್ಲಿ ವಿಶ್ವ ಬಂಡವಾಳ ಹೂಡಿಕೆ ಸಮಾವೇಶ: ರಾಜ್ಯ ಸಚಿವ ಸಂಪುಟ ತೀರ್ಮಾನ

Webdunia
ಗುರುವಾರ, 15 ಜುಲೈ 2021 (14:24 IST)
ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಫೆಬ್ರವರಿ 9, 10 ಮತ್ತು 11ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಮಾಡಲು ನಿರ್ಧಾರಿಸಲಾಗಿದೆ.
 
ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
 
ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡಲು ಒಪ್ಪಿಗೆ. 6 ಆಕ್ಸಿಜನ್ ಘಟಕ ಇದ್ದು, ಇದನ್ನು ಇನ್ನೂ ಹೆಚ್ಚಿಸಲು ತೀರ್ಮಾನ. ಘಡಕ ಸ್ಥಾಪಿಸುವವರಿಗೆ 25% ಕ್ಯಾಪಿಟಲ್ ಸಬ್ಸಿಡಿ ನೀಡಲು ನಿರ್ಧಾರ, ವಿದ್ಯುತ್ ಸುಂಕದಿಂದ ಮೂರು ವರ್ಷಗಳಿಗೆ ಪೂರ್ಣ ವಿನಾಯಿತಿ ನೀಡಲು ತೀರ್ಮಾನ. ಸ್ಟಾಂಪ್ ಡ್ಯೂಟಿಯಿಂದ ಸಂಪೂರ್ಣ ವಿನಾಯಿತಿ ನೀಡಲು ತೀರ್ಮಾನ
 
ಕೃಷಿ ಇಲಾಖೆಯಿಂದ ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆ ಜಾರಿಗೆ ಅನುಮೋದನೆ. ಆಪ್‌ ಮೂಲಕ ರೈತರೇ ಬೆಳೆ ಸಮೀಕ್ಷೆ ಮಾಡಲಿದ್ದಾರೆ. ಈ ಸಂಬಂಧ 48 ಕೋಟಿ ರೂ.ಗೆ ಅನುಮೋದನೆ
 
ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ಮೊದಲ‌ ಹಂತದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ತೆರೆಯಲು 15 ಕೋಟಿ ರೂ. ಮೊತ್ತಕ್ಕೆ ಸಂಪುಟ ಅನುಮತಿ. ಬಳಿಕ ಹರಚ್ಚು ಹಣ ಬಿಡುಗಡೆ ಮಾಡಲು ತೀರ್ಮಾನ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments