Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Webdunia
ಮಂಗಳವಾರ, 1 ಮಾರ್ಚ್ 2022 (19:16 IST)
ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ  6 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಆಧಾರದ ಮೇಲೆ ಕಾರ್ಯಕರ್ತೆಯರಿಗೆ ರೂ.10 ಸಾವಿರ ಮತ್ತು ಸಹಾಯಕಿಯರಿಗೆ ರೂ.5 ಸಾವಿರ, ಮಿನಿ ಅಂಗನವಾಡಿ ಕಾರ್ಯಕರ್ತೆ ರೂ.6250 ವನ್ನು ಪಾವತಿಸಲಾಗುವುದು. 
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಕೇಂದ್ರಗಳು ಹಚ್ಚಿನಾಡು, ಬೀರುಗ 1, ವೆಸ್ಟ್‍ನೆಮ್ಮಲೆ, ಕಾನೂರು ಕಾಲೋನಿ, ಕೋಣನಕಟ್ಟೆ 2, ಮಗ್ಗುಲ.       
       ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಕುಂದ, ಕಾಟಿಗುಂಡಿ ಪೈಸಾರಿ, ಬಿ.ಶೆಟ್ಟಿಗೇರಿ, ದೇವನೂರು 2, ತೆರಾಲು 2, ವಿ.ಬಾಡಗ, ಗುಡ್ಲೂರು,ಕೊಪ್ಪ,  ಗದ್ದೆಮನೆ, ಹೊಸನಲ್ಲಿಕೋಟೆ, ಆಂಗೋಡು, ಬೇಗೂರು 1, ಹೈಸೋಡ್ಲೂರು, ಬೆಳ್ಳುಮಾಡು 1, ಬೇತ್ರಿ,  ಪಡಚಿಕಾಡು, ಮೈಲಾಪುರ, ನಾಲ್ಕೇರಿ 1, ಪಾಲ್ದಾಳ, ಪೊನ್ನಂಪೇಟೆ 5, ಪೊನ್ನಂಪೇಟೆ 3, ದುಬಾರೆ, ಕುರ್ಚಿ 2, ಬೀರುಗ 1, ಕುಂದೂರು, ಟಿ.ಶೆಟ್ಟಿಗೇರಿ 1, ಸಣ್ಣರೇಷ್ಮೆ, ಬಂಗಾಳ ಬೀದಿ, ಗಾಂಧಿನಗರ.
       ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್, 29 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in  ನಲ್ಲಿ ಅರ್ಜಿ ಭರ್ತಿ ಮಾಡಬಹುದಾಗಿದೆ. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೆ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ.  ಹೆಚ್ಚಿನ ಮಾಹಿತಿಗೆ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ದೂ.ಸಂ.  08274-249010 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments