Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪ

Krishnaveni K
ಸೋಮವಾರ, 26 ಆಗಸ್ಟ್ 2024 (12:57 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು.

ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂದು ರೂಪ ವರದಿಯಲ್ಲಿ ಹೇಳಿದ್ದರು.

ಈ ಬಗ್ಗೆ ಒಂದು ಎಫ್ ಐಆರ್ ಕೂಡಾ ದಾಖಲಾಗಿತ್ತು. ಆದರೆ ಬಳಿಕ ಡಿ ರೂಪ ಅವರನ್ನೇ ವರ್ಗಾವಣೆ ಮಾಡಲಾಗಿತ್ತು. ಇದೀಗ ದರ್ಶನ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೆ ಜೈಲಿನ ಅಕ್ರಮಗಳು ಬಯಲಾಗಿದೆ. ಅಂದು ರೂಪ ನೀಡಿದ್ದ ವರದಿ ನಿಜವೆಂದು ಮತ್ತೆ ಸಾಬೀತಾಗಿದೆ.

ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿದ ಡಿ ರೂಪ ಜೈಲಿನಲ್ಲಿ ಇಂತಹದ್ದಕ್ಕೆಲ್ಲಾ ಅವಕಾಶವಿಲ್ಲ. ನಿಯಮಾವಳಿಗಳ ಪ್ರಕಾರ ಅವರ ಬ್ಯಾರಕ್ ನಲ್ಲಿರಬೇಕು. ಏನಾದರೂ ಕೆಲಸವಿದ್ದಾಗ ಮಾತ್ರ ಹೊರಗಡೆ ಕೂರಲು ಅವಕಾಶವಿರುತ್ತದೆ. ಆದರೂ ಸಿಗರೇಟು, ಕಾಫಿಗೆಲ್ಲಾ ಅವಕಾಶವಿರಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments