Webdunia - Bharat's app for daily news and videos

Install App

ಇಂದು ಐಪಿಎಸ್ ಅಧಿಕಾರಿ ಹರೀಶ್ ಅಂತ್ಯಕ್ರಿಯೆ

Webdunia
ಶುಕ್ರವಾರ, 19 ಫೆಬ್ರವರಿ 2016 (11:14 IST)
ಚೆನ್ನೈನಲ್ಲಿ ನಿನ್ನೆ ಮುಂಜಾನೆ ನಿಗೂಢವಾಗಿ ಸಾವನ್ನಪ್ಪಿರುವ ಕರ್ನಾಟಕದ ಐಪಿಎಸ್ ಅಧಿಕಾರಿ ಎನ್. ಹರೀಶ್ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಕೋಲಾರ  ಜಿಲ್ಲೆಯ ಮಾಲೂರಿನ ಬಂಡೆಹೊಸೂರು ಗ್ರಾಮದಲ್ಲಿ  ಅಂತ್ಯಕ್ರಿಯೆ ನಡೆಯಲಿದೆ.


ಸದ್ಯ ಹರೀಶ್ ಮರಣೋತ್ತರ ಪರೀಕ್ಷೆ ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನೆರವೇರುತ್ತಿದ್ದು, ಡಾಕ್ಟರ್ ರಾಮಲಿಂಗಮ್ ನೇತೃತ್ವದ ನಾಲ್ಕು ವೈದ್ಯರ ತಂಡ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ. ಮರಣೋತ್ತರ ಪರೀಕ್ಷೆಯ ವಿಡಿಯೋ ಚಿತ್ರೀಕರಣವನ್ನು ಸಹ ಮಾಡಲಾಗುತ್ತಿದೆ. 
 
ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ನೀಡಲಾಗುತ್ತಿದ್ದು ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ. 
 
ಚೆನ್ನೈನಲ್ಲಿ ಭೃಷ್ಟಾಚಾರ ನಿಗ್ರಹ ದಳದ ಎಸ್‌ಪಿಯಾಗಿದ್ದ ಕೋಲಾರ ಜಿಲ್ಲೆಯ ಹರೀಶ್ 2009ನೇ ಐಪಿಎಸ್ ಬ್ಯಾಚ್‍ನ ತಮಿಳುನಾಡು ಕೇಡರ್ ಅಧಿಕಾರಿಯಾಗಿದ್ದರು. ಆದರೆ ನಿನ್ನೆ ಚೆನ್ನೈನ ಐಪಿಎಸ್ ಅಧಿಕಾರಿಗಳ ಮೆಸ್‍ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು.
 
ಐಪಿಎಸ್ ಅಧಿಕಾರಿ ಹರೀಶ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಒಂದೆಡೆ ವೈಯಕ್ತಿಕ ವಿಚಾರ ಕಾರಣವೆಂದು ಹೇಳಲಾಗುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಒತ್ತಡ, ಬಡ್ತಿ ಸಿಗಲು ವಿಳಂಬವಾಗುತ್ತಿರುವುದರಿಂದ ಖಿನ್ನತೆಗೊಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments