Webdunia - Bharat's app for daily news and videos

Install App

ಪೊಲೀಸ್ ಅಧಿಕಾರಿ ಫೋನ್ ಕದ್ದಾಲಿಕೆ ಮಾಡಿಸಿದ್ರಾ..?

Webdunia
ಮಂಗಳವಾರ, 6 ಜೂನ್ 2017 (10:54 IST)
ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದ ಫೋನ್ ಕದ್ದಾಲಿಕೆ ವಿವಾದ ಇದೀಗ ಪೊಲೀಸ್ ಇಲಾಖೆಯಲ್ಲೂ ಕಂಡುಬಂದಿದೆ. ಐಪಿಎಸ್ ಅಧಿಕಾರಿಯೇ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಮಾಡಿದ್ದಾರೆಂಬ ಕುರಿತು ಮಾಹಿತಿ ಸಿಕ್ಕಿರುವುದಾಗಿ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಅಷ್ಟೇ ಅಲ್ಲ, ಕದ್ದಾಲಿಕೆ ಮಾಹಿತಿಯನ್ನ ಟ್ಯಾಪ್ ಮಾಡಿಸಿದ್ದ ಅಧಿಕಾರಿಯೇ ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ.

ಕಾವೇರಿ ಹೋರಾಟದ ಸಂದರ್ಭ ಕನ್ನಡ ಪರ ಹೋರಾಟಗಾರ, ಕರವೇ ಅಧ್ಯಕ್ಷ ನಾರಾಯಣಗೌಡರು ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ಜೊತೆ ಫೋನಿನಲ್ಲಿ ಮಾತನಾಡಿದ್ದನ್ನ ಕದ್ದಾಲಿಕೆ ಮಾಡಿಸಿರುವ ಅಧಿಕಾರಿ ಬಳಿಕ ಅದನ್ನ ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು, ಖಾಸಗಿ ಮಾಧ್ಯಮದ ಜೊತೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ, ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

 ಇದೇವೇಳೆ, ಪ್ರಕರಣ ಕುರಿತಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ದೂರಿನನ್ವಯ ಡಿಜಿಪಿ ಆರ್.ಕೆ. ದತ್ತಾ ಮೂರು ಬಾರಿ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments