Publish Date: Mon, 28 Aug 2023 (19:20 IST)
Updated Date: Mon, 28 Aug 2023 (19:22 IST)
ಆಪರೇಷನ್ ಹಸ್ತ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಯಾರು ಯಾರಿಗೆ ನಮ್ಮ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತದ ಮೇಲೆ ನಂಬಿಕೆ ಇದೆಯೋ ವಿಶ್ವಾಸ ಇದೆಯೋ ಅಂತವರು ಬರ್ತಾರೆ. ಜನಪರ ಕಾರ್ಯಕ್ರಮ ಕೊಡ್ತಾ ಇರೋ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ. ಯಾವುದೇ ಕಂಡಿಷನ್ ಇಲ್ಲದೆ ಸೇರುತ್ತಿದ್ದಾರೆ ಎಂದರು.