Webdunia - Bharat's app for daily news and videos

Install App

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿ?

Webdunia
ಗುರುವಾರ, 17 ಮಾರ್ಚ್ 2022 (08:28 IST)
ಶಿವಮೊಗ್ಗ : ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು ಗುರುತಿಸಲಾಗಿದೆ. ಭೂಮಿಕಾ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವಳಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಈ ವೇಳೆ ಭೂಮಿಕಾಳಿಗೆ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಸಮೀರ್ ಎಂಬಾತನ ಪರಿಚಯವಾಗಿದೆ. ಪರಿಚಯ ನಂತರ ಇಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು.

ಭೂಮಿಕಾ ಅಪ್ರಾಪ್ತಳಾಗಿ ಇದ್ದಾಗಲೇ ಸಮೀರ್ ವಿವಾಹ ಮಾಡಿಕೊಂಡಿದ್ದ. ವಿವಾಹದ ನಂತರ ಭೂಮಿಕಾ ಹೆಸರನ್ನು ಮುಸ್ಕಾನ್ ಭಾನು ಎಂದು ಬದಲಾಯಿಸಿದ್ದನಂತೆ ಪತಿ ಸಮೀರ್, ಮದುವೆ ನಂತರ ಭೂಮಿಕಾಳಿಗೆ ಆಕೆಯ ಕುಟುಂಬಸ್ಥರು ಭೇಟಿ ಮಾಡಲು ಅವಕಾಶ ನೀಡುತ್ತಿರಲಿಲ್ಲವಂತೆ. ಆಗಾಗ ಪತಿ ಸಮೀರ್ ಆತನ ತಾಯಿ ಹಾಗೂ ಸಹೋದರಿಯರು ಕಿರುಕುಳ ನೀಡುತ್ತಿದ್ದರು ಎಂದು ಮೃತ ಭೂಮಿಕಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಗರ್ಭಿಣಿಯಾಗಿದ್ದ ಭೂಮಿಕಾಳಿಗೆ ಹೆರಿಗೆಗಾಗಿ ಕಳೆದ ವಾರ ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಭೂಮಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಅಧಿಕ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ನಂತರ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಸಹ ಭೂಮಿಕಾ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಭೂಮಿಕಾ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments