Webdunia - Bharat's app for daily news and videos

Install App

ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ನಿರ್ಧಾರ ಸರೀನಾ

Krishnaveni K
ಮಂಗಳವಾರ, 25 ಜೂನ್ 2024 (16:03 IST)
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಹತ್ಯೆಗೀಡಾದ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿವೆ.

ರೇಣುಕಾಸ್ವಾಮಿ ಕೂಡಾ ಅಮಾಯಕನೇನಲ್ಲ. ಆತನಿಗೆ ಸೋಷಿಯಲ್ ಮೀಡಿಯಾದಲ್ಲಿ ಹುಡುಗಿಯರಿಗೆ, ಸೆಲೆಬ್ರಿಟಿಗಳಿಗೆ ಅಶ್ಲೀಲ ಸಂದೇಶ ಕಳುಹಿಸುವ ಚಟವಿತ್ತು ಎಂದು ಈಗಾಗಲೇ ಸುದ್ದಿ ಹರಡಿದೆ. ಇದಕ್ಕೆ ತಕ್ಕಂತೆ ಇತ್ತೀಚೆಗೆ ನಟಿಯೊಬ್ಬರು ತಮಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ. ಅದಕ್ಕೇ ಆತನನ್ನು ಬ್ಲಾಕ್ ಮಾಡಿದ್ದೆ ಎಂದಿದ್ದರು.

ರೇಣುಕಾಸ್ವಾಮಿ ಪೋಷಕರಿಗೆ ಆತನ ದುಡಿಮೆಯೇ ಆಧಾರವಾಗಿತ್ತು. ಈಗ ರೇಣುಕಾಸ್ವಾಮಿ ಹತ್ಯೆಯಾಗಿರುವುದರಿಂದ ಕುಟುಂಬಸ್ಥರಿಗೆ ಸಂಸಾರ ಸಾಗಿಸುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ಪೋಷಕರು ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸಿಎಂ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಆದರೆ ಇದಕ್ಕೆ ಕೆಲವರಿಂದ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ. ಇಂತಹ ಎಷ್ಟೋ ಸಾವುಗಳು ಪ್ರಪಂಚದಲ್ಲಿ ಆಗುತ್ತಿರುತ್ತದೆ. ಅದೂ ಈತ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಹತ್ಯೆಯಾಗಿದ್ದಾನೆ. ದರ್ಶನ್ ಆಂಡ್ ಗ್ಯಾಂಗ್ ಮಾಡಿರುವುದು ತಪ್ಪಾಗಿರಬಹುದು. ಆದರೆ ಈತನೂ ಏನೂ ಸಾಚಾ ಆಗಿರಲಿಲ್ಲ. ಹೀಗಿರುವಾಗ ಆತನ ಕುಟುಂಬಕ್ಕೆ ಸರ್ಕಾರಿ ಕೆಲಸ ಕೊಟ್ಟರೆ ಏನು ಸಂದೇಶ ಕೊಟ್ಟಂತಾಗುತ್ತದೆ. ಬೇಕಿದ್ದರೆ ಸ್ವಲ್ಪ ಆರ್ಥಿಕ ಸಹಾಯ ಮಾಡಲಿ ಎಂದು ನೆಟ್ಟಿಗರಲ್ಲಿ ಕೆಲವರು ಅಪಸ್ವರವೆತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments