Select Your Language

Notifications

webdunia
webdunia
webdunia
webdunia

ಪತ್ನಿ ಅಡುಗೆ ಮಾಡಿಲ್ಲವೆಂದು ಸಿಟ್ಟಾದ ಪತಿ ಮಾಡಿದ್ದೇ ನು?

ಪತ್ನಿ ಅಡುಗೆ ಮಾಡಿಲ್ಲವೆಂದು ಸಿಟ್ಟಾದ ಪತಿ ಮಾಡಿದ್ದೇ ನು?
ಬೆಂಗಳೂರು , ಬುಧವಾರ, 10 ಜನವರಿ 2018 (11:54 IST)

ಪತ್ನಿ ಅಡುಗೆ ಮಾಡಿಲ್ಲವೆಂದು ಕೋಪಗೊಂಡ ಪತಿರಾಯ ಪತ್ನಿಯನ್ನೇ ಕೊಲೆಗೈದಿರುವ ಘಟನೆ ನೆಲಮಂಗಲ ತಾಲ್ಲೂಕಿನ ಸೂಲಕುಂಟೆಯಲ್ಲಿ ಜರುಗಿದೆ.

ಲಕ್ಷ್ಮೀ ನರಸಮ್ಮ(40) ಎಂಬ ಗೃಹಿಣಿಯೇ ಮೃತಪಟ್ಟಿದ್ದಾಳೆ. ಪತಿ ವೆಂಕಟೇಶ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಅಡುಗೆ ಮಾಡದ ಪತ್ನಿಯ ವಿರುದ್ಧ ಸಿಟ್ಟಾದ ಪತಿ ಕೋಲಿನಿಂದ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಗೃಹಿಣಿ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವೆಂಕಟೇಶನನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಭೂಗತ ಪಾತಕಿಯಿಂದ ಸಚಿವ ತನ್ವೀರ್ ಸೇಠ್ ಅವರಿಗೆ ಬೆದರಿಕೆ