ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ ಕರ್ನಾಟಕ ರಾಜ್ಯಪಾಲರಿಗೆ ಕಾಡಿದೆಯಾ ಪ್ರಾಣ ಭೀತಿ

Krishnaveni K
ಗುರುವಾರ, 22 ಆಗಸ್ಟ್ 2024 (11:52 IST)
Photo Credit: Facebook
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ವಿಚಾರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕರ್ನಾಟಕ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೆ ಈಗ ಜೀವ ಭಯ ಕಾಡಿದೆಯಾ? ಇದಕ್ಕೆ ಕಾರಣ ರಾಜ್ಯಪಾಲರಿಗೆ ಈಗ ಭದ್ರತೆ ಹೆಚ್ಚಿಸಿರುವುದು ಕಾರಣವಾಗಿದೆ.

ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೆ ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾರೆ. ಮುಂದೊಂದು ದಿನ ಬಾಂಗ್ಲಾದೇಶದಲ್ಲಾದ ಗತಿಯೇ ಕರ್ನಾಟಕದ ರಾಜ್ಯಪಾಲರಿಗೂ ಆಗುತ್ತದೆ ಎಂದು ಐವಾನ್ ಡಿಸೋಜರಂತಹ ನಾಯಕರು ಬಹಿರಂಗವಾಗಿಯೇ ಎಚ್ಚರಿಕೆ ವಹಿಸಿದ್ದರು.

ಈ ಹಿನ್ನಲೆಯಲ್ಲಿ ರಾಜ್ಯಪಾಲರಿಗೆ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯಪಾಲರಿಗೆ ಈಗ ಬುಲೆಟ್ ಪ್ರೂಫ್ ಕಾರು ಒದಗಿಸಲಾಗಿದೆ. ಈಗಾಗಲೇ ರಾಜ್ಯಪಾಲರಿಗೆ ಝಡ್ ಪ್ಲಸ್ ಭದ್ರತೆಯಿದೆ. ಈಗ ರಾಜ್ಯಪಾಲರ ಭದ್ರತೆಗೆ 40 ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲರ ಮೇಲೆ ಆಕ್ರೋಶ ಹೆಚ್ಚಾಗಿದೆ. ಆಗಸ್ಟ್ 29 ರವರೆಗೂ ರಾಜ್ಯಪಾಲರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೇ ಇರಲು ನಿರ್ಧರಿಸಿದ್ದಾರೆ. ರಾಜ್ಯಪಾಲರು ಭಾಗಿಯಾಗುವ ಕಾರ್ಯಕ್ರಮದಲ್ಲಿ ದಾಂಧಲೆ ನಡೆಯುವ ಸಾಧ್ಯತೆ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಓಡಿಸುತ್ತಲೇ ಮೊಬೈಲ್ ನಲ್ಲಿ ಲಲ್ಲೆ ಹೊಡೆಯುತ್ತಿದ್ದ ಚಾಲಕ: Video

ತರಬೇತಿ ಕ್ಲಾಸ್‌ಗೆ ಮಂಗನ ಎಂಟ್ರಿ: ಗುಜರಾತ್‌ನಲ್ಲಿ ಶಿಕ್ಷಕರ ಸೆಷನ್ ಮಧ್ಯೆ ವಾನರನ ಹವಾ Video

Video: ಯಮುನಾ ನದಿ ತೀರದಲ್ಲಿ ದೈತ್ಯ ಜಿರಳೆಗಳ ದಂಡು ಕಂಡು ದಂಗಾದ ಜನ

ಓಡು ಓಡಲೇ... ಪೆಟ್ರೋಲ್ ಗಾಗಿ ಕ್ಯಾನ್ ಹಿಡ್ಕೊಂಡು ಓಡಿದ ಜನ ಸಾಗರ Video

ಕಾಕ್ರೋಚ್ ಜನತಾ ಪಾರ್ಟಿ ಮುಂದೆ ಚುನಾವಣೆಗೆ ಸ್ಪರ್ಧಿಸುತ್ತದೆಯೇ: ಕುತೂಹಲಕಾರಿ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments