ಯೋಗೇಶ್ವರ್ ತೆಕ್ಕೆಯಲ್ಲಿದ್ದಾರಾ ಕಂಪ್ಲಿ ಶಾಸಕ ಗಣೇಶ್?

Webdunia
ಬುಧವಾರ, 30 ಜನವರಿ 2019 (10:56 IST)
ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮೆರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರು ಮಾಜಿ ಶಾಸಕ ಯೋಗೇಶ್ವರ್ ತೆಕ್ಕೆಯಲ್ಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.


ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಅವರನ್ನು ಹುಡುಕಲು ಪೊಲೀಸರು ಒಟ್ಟು 4 ತಂಡಗಳನ್ನು ರಚಿಸಿ  ಸತತವಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಾಸಕ ಗಣೇಶ್‌ ನಾಪತ್ತೆಯಾಗಿ 10 ದಿನಗಳು ಕಳೆದರೂ, ಶಾಸಕರನ್ನು ಹುಡುಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.


ಆದರೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ. ಅಲ್ಲದೇ ಈ ಘಟನೆ ನಡೆದ ದಿನದಿಂದ ಯೋಗೇಶ್ವರ್‌ ಕೂಡ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರ ಮೊಬೈಲ್‌ ಸ್ವಿಚ್‌ಆಫ್‌ ಆಗಿದೆ ಎನ್ನಲಾಗಿದೆ.


ಅಪರೇಷನ್ ಕಮಲ ಯಶಸ್ವಿಗೊಳಿಸಲು ಹಾಗೂ ತಮ್ಮ ಶತ್ರುಗಳಾದ ಡಿಕೆಶಿ ಸಹೋದರರಿಗೆ ಸರಿಯಾದ ಪಾಠ ಕಲಿಸಲು ಅವರು ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments