Webdunia - Bharat's app for daily news and videos

Install App

ಬಿಜೆಪಿಯಿಂದ ಶಾಸಕ ರಾಜು ಕಾಗೆ ಉಚ್ಚಾಟನೆ?, ಜಗದೀಶ್ ಶೆಟ್ಟರ್ ಹೇಳಿದ್ದೇನು?

Webdunia
ಗುರುವಾರ, 19 ಜನವರಿ 2017 (14:58 IST)
ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರಾಜು ಕಾಗೆ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ನಾಳೆ ಕಲಬುರ್ಗಿಯಲ್ಲಿ ನಡೆಯುವ ಕೋರ್ ಕಮಿಟಿಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಹುದ್ದೆ ನೇಮಕಕ್ಕೆ ರಾಜ್ಯ ಸರಕಾರ ಆಸಕ್ತಿ ತೋರಿಸುತ್ತಿಲ್ಲ. ರಾಜ್ಯ ಸರಕಾರದ ಅವಧಿ ಮುಗಿಯುತ್ತಾ ಬಂದರೂ ಲೋಕಾಯುಕ್ತರ ನೇಮಕವಾಗಿಲ್ಲ. ಲೋಕಾಯುಕ್ತ ಸಂಸ್ಥೆಯ ಪರಿಸ್ಥಿತಿ ಹಲ್ಲುಕಿತ್ತ ಹಾವಿನಂತಾಗಿದೆ. ಈಗ ನೋಡಿ ಎಸಿಬಿ ಪರಿಸ್ಥಿತಿ ಹೇಗಾಗಿದೆ ಎಂದರು.
 
ಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೇ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರದ ಆರಂಭದಲ್ಲೇ ಚಿನ್ನದ ದರ ಶಾಕ್ ನೀಡುವಂತಿದೆ

ಹಿಂದೂ ವ್ಯಾಪಾರಿಯ ಕೊಂದು ಮೃತದೇಹದ ಮೇಲೆ ಡ್ಯಾನ್ಸ್ ಮಾಡಿದ ಹಂತಕರು

ಮುಂದಿನ ಸುದ್ದಿ
Show comments