Webdunia - Bharat's app for daily news and videos

Install App

ಹೆತ್ತಾಕೆಯೇ ಮಗುವನ್ನು ಕೊಂದಳೇ?

Webdunia
ಭಾನುವಾರ, 30 ಅಕ್ಟೋಬರ್ 2016 (13:54 IST)
ತುಮಕೂರು: ಪಾವಗಡದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಂಬುಲೆನ್ಸ್ ಡ್ರೈವರ್ ಪತ್ನಿ ಮೇಲಿನ ಅತ್ಯಾಚಾರ ಹಾಗೂ ಮಗುವಿನ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಆಕೆಯೇ ನಾಟಕವಾಡಿ ಮಗುವನ್ನು ಕೊಲೆ ಮಾಡಿ ಸುಳ್ಳು ಪ್ರಕರಣ ದಾಖಲಿಸಿರಬಹುದು ಎನ್ನಲಾಗುತ್ತಿದೆ.
 
ಪತ್ನಿ ಮಂಜುಳಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಎರಡಯ ವರ್ಷಗಳಿಂದ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆಕೆಯೇ ಮಗುವನ್ನು ಕೊಂದು ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಸುಳ್ಳು ದೂರು ನೀಡಿರಬಹುದು ಎಂದು ಆಕೆಯ ಪತಿ ಆಂಜನೇಯ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಪೊಲೀಸರಿಗೆ ಮಹಿಳೆಯ ಮೇಲೆಯೇ ಅನುಮಾನ ಬಂದಿದದು, ಆಕೆಯೇ ಮಗುವನ್ನು ಯಾಕೆ ಕೊಂದಿರಬಾರದು ಎಂದು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಅಲ್ಲದೆ, ಅತ್ಯಾಚಾರ ಎಸಗಿದ ಕಾಮುಕರ ಬಗ್ಗೆ ಮಾಹಿತಿ ನೀಡುವಲ್ಲಿಯೂ ಮಹಿಳೆ ಹಿಂದೇಟು ಹಾಕುತ್ತಿದ್ದು, ಪೊಲೀಸರ ಅನುಮಾನಕ್ಕೆ ಇನ್ನಷ್ಟು ಪುಷ್ಠಿ ನೀಡಿದಂತಾಗಿದೆ.
 
ಪತಿ ಆಂಜನೇಯ ಅಪಘಾತಕ್ಕೀಡಾಗಿದ್ದಾನೆ ಎಮದು ಕಲವರು ಕರೆ ಮಾಡಿ, ನನ್ನನ್ನು ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ. ಹಾಗೂ ಮಗುವನ್ನು ಕೊಂದು ಹಾಕಿದ್ದಾರೆ ಎಮದು ಮಂಜುಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಸಂದರ್ಭದಲ್ಲಿ ತೀವ್ರ ಸ್ವಸ್ಥಗೊಂಡಿದ್ದ ಆಕೆಯನ್ನು ಪಾವಗಡದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತ್ನಿ ಮೇಲೆ ಅತ್ಯಾಚಾರವಾಗಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಪುಟ್ಟಪರ್ತಿಯಲ್ಲಿ ಅಂಬುಲೆನ್ಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಂಜನೇಯ ಆಸ್ಪತ್ರೆಗೆ ಬಂದು ವಿಚಾರಿಸಿದ್ದಾನೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments