Webdunia - Bharat's app for daily news and videos

Install App

ಪೊಲೀಸರು, ಜಿಲ್ಲಾಧಿಕಾರಿಗಳು ದನ ಕಾಯ್ತಿದ್ದಾರಾ: ವಾಟಾಳ್ ಪ್ರಶ್ನೆ

Webdunia
ಸೋಮವಾರ, 28 ಜುಲೈ 2014 (14:50 IST)
ಎಂಇಎಸ್ ಕಾರ್ಯಕರ್ತರು ಗಡಿನಾಡ ಗ್ರಾಮಗಳಲ್ಲಿ ಮರಾಠಿ ನಾಮಫಲಕಗಳನ್ನು ನೆಡುತ್ತಿರುವ ಹಿನ್ನೆಲೆಯಲ್ಲಿ ಹಲವು ಕನ್ನಪರ ಸಂಘಟನೆಗಳು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದವು. ಸಂಭಾಜಿ ಪಾಟೀಲ್  ಅವರ ಶಾಸಕ ಸ್ಥಾನ ವಜಾ ಮಾಡಲು ಆಗ್ರಹಿಸಿದವು.

ಬೆಂಗಳೂರಿನ ವಿಧಾನಸೌಧದಲ್ಲಿರುವ  ದೇವರಾಜ್ ಅರಸ್ ಪ್ರತಿಮೆ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. 'ಗಂಡುಮೆಟ್ಟಿದ ಕನ್ನಡದ ಗ್ರಾಮಗಳಲ್ಲಿ ಮರಾಠಿ ನಾಮಫಲಕಗಳನ್ನು ಹಾಕಿದ್ದಾರೆ. ಪೊಲೀಸರು, ಜಿಲ್ಲಾಧಿಕಾರಿಗಳು ಏನು ದನ ಕಾಯ್ತಿದ್ದಾರಾ. ನಮ್ಮ ಹಳ್ಳಿಗಳಲ್ಲಿ ಈ ರೀತಿ ನಾಮಫಲಕ ಹಾಕುವುದು ಸರಿಯಲ್ಲ' ಎಂದು ಎಂಇಎಸ್ ಪುಂಡಾಟಿಕೆಗೆ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. 
 
 ಈ ನಡುವೆ ಎಸ್. ಪಿ. ಚಂದ್ರಗುಪ್ತ ಯಳ್ಳೂರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಜಿಲ್ಲೆಯ ಗಡಿಭಾಗದಲ್ಲಿ ನಾಕಬಂಧಿ ಹಾಕಿದ್ದೇವೆ. ಇಲ್ಲಿ ಪೊಲೀಸ್ ಬಂದೋಬಸ್ತ್ ಹಾಕಿದ್ದು,ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಚಂದ್ರಗುಪ್ತ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments