Publish Date: Sun, 14 Mar 2021 (12:58 IST)
Updated Date: Sun, 14 Mar 2021 (13:04 IST)
ಬೆಳಗಾವಿ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ರಮೇಶ್ ಜಾರಕೊಹೊಳಿ ಅವರನ್ನು ಮುಗಿಸಲು ನಡೆಸಿದ ರಾಜಕೀಯ ಷಡ್ಯಂತ್ರ ಎಂಬ ಕೂಗು ಕೇಳಿಬರುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಸಹೋದರ ಶಾಸಕ ಸತೀಶ್ ಜಾರಕಿಹೊಳಿ, ಯಾರನ್ನು ಯಾರು ಸಿಲುಕಿಸಲು ಆಗಲ್ಲ. ಪೊಲೀಸರೇ ಅಂತಿಮ ತೀರ್ಮಾನ ಮಾಡಬೇಕು.
ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರುತ್ತೆ ಎಂದು ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಈಗಾಗಲೇ ದೂರು ಕೊಟ್ಟಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಹೊರಬಂದೇ ಬರುತ್ತೆ ಎಂದು ಅವರು ತಿಳಿಸಿದ್ದಾರೆ.