Select Your Language

Notifications

webdunia
webdunia
webdunia
webdunia

ರೋಷನ್ ಬೇಗ್ ಅಮಾನತಿಗೆ ಸಿದ್ದರಾಮಯ್ಯ ಕಾರಣನಾ?

ರೋಷನ್ ಬೇಗ್ ಅಮಾನತಿಗೆ ಸಿದ್ದರಾಮಯ್ಯ ಕಾರಣನಾ?
ಬೆಂಗಳೂರು , ಬುಧವಾರ, 19 ಜೂನ್ 2019 (10:24 IST)
ಬೆಂಗಳೂರು : ಕಾಂಗ್ರೆಸ್ ನಿಂದ ಮಾಜಿ ಶಾಸಕ ಆರ್.ರೋಷನ್ ಬೇಗ್ ಅಮಾನತುಗೊಂಡಿರುವುದರ ಹಿಂದೆ  ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬ ಮಾತು ಇದೀಗ ಕೇಳಿಬರುತ್ತಿದೆ.




ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆ ಮಾಜಿ ಶಾಸಕ ಆರ್.ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆದರೆ ಈ ಬೆಳವಣೆಗೆಯ ಹಿಂದೆ ಎರಡು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿದ್ದ ಸಿದ್ದರಾಮಯ್ಯ ತಂತ್ರವಿದೆ ಎಂಬ ಮಾತು ಕೇಳಿಬರುತ್ತಿದೆ.


ಎರಡು ದಿನಗಳಿಂದ ದೆಹಲಿಯಲ್ಲಿರುವ ಸಿದ್ದರಾಮಯ್ಯ ಎ.ಕೆ.ಆ್ಯಂಟಿನಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ದೂರು ಕೊಟ್ಟ ದಿನವೇ ರೋಷನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರೋಷನ್ ಬೇಗ್ ಅಮಾನತಾಗಲು ಸಿದ್ದರಾಮಯ್ಯ ಅವರೇ ಕಾರಣ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೋಷನ್ ಬೇಗ್ ಅಮಾನತು ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?