Select Your Language

Notifications

webdunia
webdunia
webdunia
webdunia

ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ?

ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ?
ಕಾರವಾರ , ಗುರುವಾರ, 25 ಜುಲೈ 2019 (12:18 IST)

ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು. ನಾನು ಅವರ ಮಾತಿನಂತೆ ನಡೆದುಕೊಂಡಿದ್ದೇನೆ. ಹೀಗಂತ ಅತೃಪ್ತ ಶಾಸಕ ಹೊಸ ಬಾಂಬ್ ಸಿಡಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರಕಾರದ ವಿಶ್ವಾಸ ಮತ ಸಂದರ್ಭದಲ್ಲಿ ದೂರ ಉಳಿಯಬೇಕು ಅಂತ ಸಿದ್ದರಾಮಯ್ಯ ಹೇಳಿದ್ದರು. ಹೀಗಾಗಿ ಅವರ ಮಾತಿನಂತೆ ನಡೆದುಕೊಂಡಿದ್ದೇನೆ. ಹೀಗಂತ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹೊಸ ವಿಷಯ ಸ್ಫೋಟಿಸಿದ್ದಾರೆ.

ನಾವು ಯಾರೂ ಆಪರೇಷನ್ ಕಮದಲ್ಲಿ ಸಿಲುಕಿಲ್ಲ. ಬಿಜೆಪಿಯವರ ಜತೆಗೆ ನಾವಿಲ್ಲ. ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ಹೊರತು ಪಕ್ಷಕ್ಕಲ್ಲ ಅಂತ ಹೇಳಿ ಅಚ್ಚರಿ ಮೂಡಿಸಿದ್ರು.

ಇನ್ನು ಅತೃಪ್ತ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದು, ಸ್ಪೀಕರ್ ತೀರ್ಮಾನದ ಬಳಿಕ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟಪಡಿಸೋದಾಗಿ ಅವರು ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಾವು ಅತೃಪ್ತ ಶಾಸಕರಲ್ಲ, ಅಸಹಾಯಕರು- ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್