Webdunia - Bharat's app for daily news and videos

Install App

ಹಿಂದೂ ಸಂಘಟನೆಯ ನಾಯಕರನ್ನು ಟಾರ್ಗೆಟ್ ಮಾಡ್ತಿದೆಯಾ ಕಾಂಗ್ರೆಸ್ ಸರ್ಕಾರ? ನೆಟ್ಟಿಗರು ಹೇಳಿದ್ದೇನು?

Webdunia
ಶುಕ್ರವಾರ, 29 ಡಿಸೆಂಬರ್ 2023 (10:12 IST)
ಬೆಂಗಳೂರು: ಇತ್ತೀಚೆಗೆ ಕೆಲವು ಹಿಂದೂ ಸಂಘಟನೆಯ ನಾಯಕರ ಮೇಲೆ ವಿವಿಧ ಕಾರಣಗಳಿಗೆ ಪ್ರಕರಣ ದಾಖಲಿಸುತ್ತಿರುವ ಬೆನ್ನಲ್ಲೇ ಬಲಪಂಥೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಸಂಘಟನೆಯ ನಾಯಕರನ್ನು ಸಿದ್ದರಾಮಯ್ಯ ಸರ್ಕಾರ ಟಾರ್ಗೆಟ್ ಮಾಡಿಕೊಂಡಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಸ್ಲಿಂ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದ್ದು, ಇದೀಗ ಬಂಧನಕ್ಕೆ ಒತ್ತಡ ಕಂಡುಬರುತ್ತಿದೆ. ಇದರ ನಡುವೆ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧವೂ ಮಾಲ್ ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

ಅದರ ಜೊತೆಗೆ ಸಂಸತ್ ನಲ್ಲಿ ಭದ್ರತಾ ಲೋಪವೆಸಗಲು ಕಾರಣರಾದವರಿಗೆ ಪಾಸ್ ನೀಡಿದ್ದಾರೆಂಬ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಈಗ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ್ದಾರೆಂದು ಪ್ರಕರಣ ದಾಖಲಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಬಲಪಂಥೀಯ ಸಮರ್ಥಕರು ಇದೆಲ್ಲಾ ಬೇಕೆಂದೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ತಂತ್ರ. ಬೇಕೆಂದೇ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments