ದಿವಾಳಿಯಾಗಿದೆಯಾ ಕಾಂಗ್ರೆಸ್‌ ಸರ್ಕಾರ, ದುಡ್ಡಿಲ್ಲದ ಖಾಲಿ 'ಕೈ' ಆಡಳಿತ

Sampriya
ಮಂಗಳವಾರ, 19 ನವೆಂಬರ್ 2024 (15:06 IST)
ಬೆಂಗಳೂರು: ರಾಜು ಕಾಗೆ ಬಳಿಕ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕರಾದ ಗವಿಯಪ್ಪ , ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಜೆಡಿಎಸ್‌ ಹೇಳಿದೆ.

ಶಾಸಕ ಗವಿಯಪ್ಪ ಅವರು ಅಸಮಾಧಾನ ವ್ಯಕ್ತಪಡಿಸುತ್ತಿರುವ ವಿಡಿಯೋ ಹಂಚಿ ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ಪೋಸ್ಟ್‌ನಲ್ಲಿ ಹೀಗಿದೆ:  ದಿವಾಳಿಯಾಗಿದೆಯಾ ಕಾಂಗ್ರೆಸ್‌ ಸರ್ಕಾರ, ದುಡ್ಡಿಲ್ಲದ ಖಾಲಿ ‘ಕೈ’ ಆಡಳಿತ

ರಾಜು ಕಾಗೆ ಬಳಿಕ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕರಾದ ಗವಿಯಪ್ಪ , ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ..

ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಗೆ ಬರೀ‌ 10 ಕೋಟಿ ಅನುದಾನ‌ ಕೊಡಲಾಗಿದೆ ಎಂದು ಶಾಸಕ ಗವಿಯಪ್ಪ ಅಸಮಾಧಾನ ತೋಡಿಕೊಂಡಿದ್ದಾರೆ. ಹಿಂದಿನ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ.. ಆದರೆ ಈ ಬಾರಿ ಅನುದಾನ ಸಿಗದೆ, ಕ್ಷೇತ್ರದಲ್ಲಿ ಆಸ್ಪತ್ರೆಗಳು, ರಸ್ತೆಗಳ ಸಮಸ್ಯೆಗಳು ಸಾಕಷ್ಟಿದೆ. ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಆಗುತ್ತಿಲ್ಲ ಎಂದು ತಮ್ಮ  ಸರ್ಕಾರದ ವಿರುದ್ಧವೇ ಕಿಡಿಕಾರಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅದಕ್ಷ ಆಡಳಿತಕ್ಕೆ ಉದಾಹರಣೆ.

ಗ್ಯಾರಂಟಿ ಯೋಜನೆಗಳಿಗೆ ಹಣಹೊಂದಿಸಲು ಹೆಣಗಾಡುತ್ತಿರುವ ಸಿಎಂ,  ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ.‌ ಸ್ವತಃ ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಕಣ್ಣೀರಿಡುತ್ತಿದ್ದರೂ ಮುಖ್ಯಮಂತ್ರಿಗಳು ಕಿವಿಗೊಡುತ್ತಿಲ್ಲ..ಯಾಕಂದರೆ ಸರ್ಕಾರದ ಬೊಕ್ಕಸ ಖಾಲಿ ಮಾಡಿರುವುದೇ ಸಿದ್ದರಾಮಯ್ಯ ಅವರ ಸಾಧನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments