Webdunia - Bharat's app for daily news and videos

Install App

ಸಿಎಂ ಹುದ್ದೆ ಖಾಲಿ ಇಲ್ವಾ...? ಸಚಿವ ಎಚ್‌ಸಿ ಮಹದೇವಪ್ಪ ಏನಂದ್ರು....?

Webdunia
ಸೋಮವಾರ, 30 ಅಕ್ಟೋಬರ್ 2023 (20:06 IST)
ಕಾAಗ್ರೆಸ್‌ನಲ್ಲಿ ಎರಡುವರೇ ವರ್ಷದ ನಂತರ ಯಾರು ಸಿಎಂ ಆಗಬೇಕು ಎನ್ನುವ ಚರ್ಚೆ ಹಲವು ಬಾರಿ ಕೇಳಿ ಬಂದಿದೆ. ಡೆಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ಈಗಾಗಲೇ ಅಧಿಕಾರ ಹಂಚಿಕೆ ಸೂತ್ರದಡಿಯಲ್ಲಿ, ಒಪ್ಪಂದವಾಗಿದೆ ಅನ್ನುವ ಮಾತುಗಳು ಕೂಡ ಜೋರಾಗಿಯೇ ಸದ್ದು ಮಾಡಿದ್ದಿದೆ.
 
ಹಾಗೇನಾದರೂ ೫೦:೫೦ ಅಧಿಕಾರ ಹಂಚಿಕೆ ಸೂತ್ರದಡಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮ್ಮುಖದಲ್ಲೇ ಇಂತಹದೊAದು ಚರ್ಚೆ, ಮಾತುಕತೆ ಆಗಿರೋದು ನಿಜವೇ ಆಗಿದ್ದರೇ, ಎರಡುವರೇ ವರ್ಷದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅನ್ನೋದು ಮಾನದಂಡವಾಗುತ್ತೆ. ಆ ನಂತರ ಸಿಎಂ ಸ್ಥಾನ ಡಿಕೆಶಿಗೆ ಒಲಿಯುತ್ತೆ ಕೂಡ.
 
ಆದರೆ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಅಂತಹದೊAದು ಚರ್ಚೆ, ಆಗದೇ ಹೋಗಿದ್ದಲ್ಲಿ, ಐದು ವರ್ಷಗಳ ಅವಧಿಗೂ ಸಿಎಂ ಆಗಿ ಸಿದ್ದರಾಮಯ್ಯನವರೇ ಕಂಟಿನ್ಯೂ ಆಗೋದು ಬಹುತೇಕ ನಿಕಿ ಆಗಿ ಬಿಡಲಿದೆ.
 
ಈಗಾಗಲೇ ಸಿದ್ದರಾಮಯ್ಯ ಆಪ್ತ ಬಳಗವೂ, ನೇರವಗಿಯೇ ಸಿದ್ದರಾಮಯ್ಯನವರೇ ಫುಲ್ ಟೈಂ ಸಿಎಂ ಅಂತ ಹಲವು ಬಾರಿ ಕೊಟ್ಟಿರುವ ಹೇಳಿಕೆಗಳು ರಾಜ್ಯ ಕಾಂಗ್ರೆಸ್‌ನಲ್ಲೇ ತಲ್ಲಣವನ್ನು ಸೃಷ್ಟಿಸಿದ್ದು ಇದೆ.
 
ಸದ್ಯ ಈಗ ಮತ್ತೇ ಡಿಕೆಶಿ ಸಿಎಂ ಕನಸಿಗೆ, ಪರೋಕ್ಷವಾಗಿ ಸಚಿವ ಎಚ್‌ಸಿ ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, ಅಂತಾ ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ ಎಚ್‌ಸಿ ಮಹದೇವಪ್ಪ ಹೇಳಿಕೆ ಕೊಟ್ಟಿದ್ದಾರೆ. 
 
ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮುಖ್ಯಮಂತ್ರಿ ಇದ್ದಾಗ ಇಂತಹ ಚರ್ಚೆ ಅನಗತ್ಯ, ಹಾಗೇ ಖಾಲಿ ಇಲ್ಲದ ಹುದ್ದೆಯ ಬಗ್ಗೆ ಮಾತಾನಾಡುವ ಅವಶ್ಯಕತೆ ಇದೆಯಾ ಅಂತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments