Webdunia - Bharat's app for daily news and videos

Install App

ಎರಡು ಗ್ರಾಮಗಳ ನಡುವೆ ತಂದಿಟ್ಟು ತಮಾಷೆ ನೋಡ್ತಿರೋ ಅಧ್ಯಕ್ಷ?

Webdunia
ಸೋಮವಾರ, 18 ಮಾರ್ಚ್ 2019 (13:32 IST)
ಅಣ್ಣ ತಮ್ಮಂದಿರಂತೆ ಇರುವ ಎರಡು ಗ್ರಾಮಗಳ ನಡುವೆ ಅಧ್ಯಕ್ಷನೊಬ್ಬ ಹುಳಿಹಿಂಡಿ ತಮಾಷೆ ನೋಡ್ತಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ವಿ ಎಸ್ ಎಸ್ ಸಂಘದ ಅಧ್ಯಕ್ಷನ ಗೂಂಡಾಗಿರಿಗೆ ಗ್ರಾಮಸ್ಥರು ಬೇಸತ್ತಿದ್ದಾರೆ. ಅಣ್ಣ-ತಮ್ಮಂದಿರಂತಿದ್ದ ಗ್ರಾಮಗಳ ನಡುವೆ ತಂದಿಕ್ಕಿ ತಮಾಷೆ ನೋಡುತ್ತಿರುವ ಅಧ್ಯಕ್ಷ ವಿಶ್ವನಾಥನ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,  ಶಿಡ್ಲಕಟ್ಟೆ- ಬರಕನಹಾಳ್ ಎಂಬ ಹೆಸರಿದ್ದ ಸಂಘದ ಹೆಸರನ್ನು ವಿಶ್ವನಾಥ್ ಅಧ್ಯಕ್ಷನಾದ ಮೇಲೆ,  ಆತ ಬರಕನಹಾಳ್ ಗ್ರಾಮದವನಾಗಿರುವುದರಿಂದ ಶಿಡ್ಲಕಟ್ಟೆ ಗ್ರಾಮದ ಹೆಸರು ಅಳಿಸಿ ದೌರ್ಜನ್ಯ ನಡೆಸಿದ್ದಾನೆ.

ಕೆಲ‌ ದಿನಗಳ ಹಿಂದೆ ನಡೆದ ಗ್ರಾಮದೇವಿ  ಶ್ರೀ ಕರಿಯಮ್ಮನ ಜಾತ್ರೆಯಲ್ಲಿಯೂ ತಗಾದೆ ತೆಗೆದು ಶಿಡ್ಲಕಟ್ಟೆ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದ. ಪೂರ್ವಜರಿಂದಲೂ ಅಣ್ಣ- ತಮ್ಮಂದಿರಂತೆ ಬಾಳುತ್ತಿರುವ ಎರಡು ಗ್ರಾಮಗಳ ಗ್ರಾಮಸ್ಥರಿಗೆ ವಿಶ್ವನಾಥ್ ನ ಕ್ರಮ ತಲೆ ನೋವಿಗೆ ಕಾರಣವಾಗಿದೆ.

ವಿಶ್ವನಾಥನ ಈ ಕುತಂತ್ರ ರಾಜಕಾರಣದಿಂದ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಶಾಲಾ ಮಕ್ಕಳು ಗ್ರಾಮಗಳ ಸಮಸ್ಯೆಯಿಂದ ಇಬ್ಭಾಗವಾಗುವ ಆತಂಕ ಎದುರಾಗಿದೆ. ವಿಶ್ವನಾಥನ ಗೂಂಡಾಗಿರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಡ್ಲಕಟ್ಟೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments