Webdunia - Bharat's app for daily news and videos

Install App

ಹಿಂದೂ ದೇವಾಲಯಗಳನ್ನು‌ ಭಕ್ತರಿಗೆ ಒಪ್ಪಿಸುವುದರಲ್ಲಿ ತಪ್ಪೇನಿದೆ?- ಶ್ರೀನಿವಾಸ ಪೂಜಾರಿ

Webdunia
ಸೋಮವಾರ, 3 ಜನವರಿ 2022 (21:00 IST)
ಮಡಿಕೇರಿ:-ರಾಜ್ಯದ ಎಷ್ಟೋ ದೇವಾಲಯಗಳಲ್ಲಿ ಇಂದು ಎಣ್ಣೆ, ಬತ್ತಿಗೂ ಹಣವಿಲ್ಲದ ಪರಿಸ್ಥಿತಿ ಇದೆ, ಇಂತಹ ದೇವಸ್ಥಾನಗಳನ್ನು ಸರ್ಕಾರ ಹಿಡಿತದಿಂದ ಸ್ವತಂತ್ರಗೊಳಿಸಿದರೆ ಒಂದಿಷ್ಟು ಅಭಿವೃದ್ಧಿಯಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
ಪಾಲಿಬೆಟ್ಟದ ಸುದ್ದಿಗಾರರೊಂದಿಗೆ ಅವರು, ರಾಜ್ಯದ ಎಷ್ಟೋ ಹಿಂದೂ ದೇವಾಲಯಗಳಲ್ಲಿ ಇಂದು ಎಣ್ಣೆ,ಬತ್ತಿಗೂ ಹಣವಿಲ್ಲದ ಪರಿಸ್ಥಿತಿ ಎದುರಿಸುತ್ತಿದೆ, ಅಂತಹ ದೇವಾಲಯಗಳನ್ನು ಭಕ್ತರ ಕೈಗೆ ತಪ್ಪೇನಿಲ್ಲ ಎಂದು ನುಡಿದರು.
ಹಿಂದೂ ದೇವಾಲಯಗಳ ಆಸ್ತಿಯನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ, ಸರ್ಕಾರದ ಹಿಡಿತದಿಂದ ಸ್ವಾತಂತ್ರ್ಯಗೊಳಿಸಲಾಗುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಂದೂ ದೇವಾಲಯಗಳನ್ನು ಸ್ವಾತಂತ್ರ್ಯಗೊಳಿಸಿ ಎಂದು ಸಿದ್ದರಾಮಯ್ಯನವರು ಕೇಳಬೇಕಿತ್ತು. ಆದರೆ ಅವರು ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಮಸೀದಿ ಹಾಗೂ ಚರ್ಚ್'ಗಳು ಆಯಾ ಸಮುದಾಯಗಳ ಆಡಳಿತದಲ್ಲಿದೆ. ಆದರೆ ಹಿಂದೂ ದೇವಾಲಯಗಳು ಮಾತ್ರ ಏಕೆ ಸರ್ಕಾರದ ಆಡಳಿತದಲ್ಲಿವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಮರು ಪ್ರಶ್ನಿಸಿದರು.
ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಾಗ, ಆರ್ಥಿಕ ಅಪರಾಧಗಳಾದಾಗ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಯಾಕೆ ಭಯಗೊಳ್ಳುತ್ತಿದ್ದಾರೋ ಗೊತ್ತಿಲ್ಲ ಎಂದು ಟೀಕಿಸಿದರು.
ಶೇ.5ರಷ್ಟಾದರೆ ಲಾಕ್‌ಡೌನ್: ಕೊಡಗು ಜಿಲ್ಲೆಯಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.1ರಷ್ಟಿದೆ. ಅದು ಶೇ.೫ ರಷ್ಟಾದರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಲ್ಲ. ಅಂತಹ ಸ್ಥಿತಿಗೆ ಜನರು ಅವಕಾಶ ಕೊಡಬಾರದು. ರಾಜ್ಯದ ಕೆಲವು ಕಡೆಗಳಲ್ಲಿ ಪಾಸಿಟಿವಿಟಿ ದರ ಶೇ.1ಕ್ಕಿಂತ ಜಾಸ್ತಿ ಇದೆ. ಅದು ಇನ್ನಷ್ಟು ಜಾಸ್ತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಇದೇ ಸಂದರ್ಭ ಲಾಕ್ ಡೌನ್ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments