Webdunia - Bharat's app for daily news and videos

Install App

ಅಣ್ಣ, ಅಣ್ಣನ ಮಗನ ಕುಕೃತ್ಯಕ್ಕೆ ಪಶ್ಚಾತಾಪವಿಲ್ಲವೇ: ಎಚ್‌ಡಿಕೆಗೆ ಕಾಂಗ್ರೆಸ್‌ನಿಂದ ಪ್ರಶ್ನೆಗಳ ಸುರಿಮಳೆ

Sampriya
ಶನಿವಾರ, 24 ಆಗಸ್ಟ್ 2024 (18:07 IST)
ಬೆಂಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಸಿಐಡಿ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ದೋಷಾರೋಷಣಾ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಟ್ವೀಟ್‌ ಮೂಲಕ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪ್ರಶ್ನೆಗಳ ಸವಾಲು ಹಾಕಿದೆ.

ಎಚ್‌.ಡಿ. ರೇವಣ್ಣ ಅವರು ಮಹಿಳೆಯ ಇಚ್ಚೆಗೆ ವಿರುದ್ಧವಾಗಿ ಕೈಹಿಡಿದು ಎಳೆದು, ಅವರ ಮೈ ಕೈಮುಟ್ಟಿ ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ. ಮಾಜಿ ಸಂಸದ ಪ್ರಜ್ವಲ್‌ ಅತ್ಯಾಚಾರ ನಡೆಸಿ, ವಿಡಿಯಿ ಚಿತ್ರೀಕರಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟದೆ ಎಂದೂ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

 ಕಾಂಗ್ರೆಸ್‌ ವಿರುದ್ಧ ಸದಾ ಕಿಡಿಕಾರುತ್ತಿರುವ ಕುಮಾರಸ್ವಾಮಿ ಅವರಿಗೆ ಈ ದೋಷಾರೋಷಣಾ ಪಟ್ಟಿಯಲ್ಲಿ ಮುಂದಿಟ್ಟುಕೊಂಡು ಪ್ರಶ್ನೆಗಳನ್ನು ಎಸೆಯಲಾಗಿದೆ.

ಕಾಂಗ್ರೆಸ್‌ ಟೀಟ್‌ನಲ್ಲಿ ಏನಿದೆ: ಕುಮಾರಸ್ವಾಮಿಯವರೇ,  ನಿಮ್ಮ ಕುಟುಂಬ ಸದಸ್ಯರ ಅನಾಚಾರಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ, ಇದಕ್ಕೊಂದು ಪತ್ರಿಕಾಗೋಷ್ಠಿ ನಡೆಸುವುದಿಲ್ಲವೇ?. ಪೊಲೀಸರು ಹಲವು ಆಯಾಮಗಳಲ್ಲಿ ಕೂಲಂಕುಶವಾಗಿ ತನಿಖೆ ನಡೆಸಿ ಕರಾಳ ಕೃತ್ಯವನ್ನು ತೆರೆದಿಟ್ಟಿದ್ದಾರೆ.

ವಿಡಿಯೋ ಬಿಡುಗಡೆ ಮಾಡಿದ್ದೇ ಮಹಾಪರಾಧ ಎಂದು ಒಂದೊಂದು ದಿನಕ್ಕೆ ಒಬ್ಬೊಬ್ಬರ ಮೇಲೆ ಆರೋಪ ಮಾಡುತ್ತಿದ್ದ ನೀವು, ತಮ್ಮ ಅಣ್ಣ, ಅಣ್ಣನ ಮಗನ ಈ ಕುಕೃತ್ಯದ ಬಗ್ಗೆ ಏಕೆ ಪಶ್ಚಾತಾಪ ಪಡುತ್ತಿಲ್ಲ? ತಮ್ಮ ಕುಟುಂಬದ ಈ ಮಹಾಪಾಪಕ್ಕೆ ತಲೆ ತಗ್ಗಿಸುತ್ತಿಲ್ಲ ಏಕೆ? ಎಂದು ಪ್ರಶ್ನೆಗಳನ್ನು ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ