Webdunia - Bharat's app for daily news and videos

Install App

ಅಣ್ಣ, ಅಣ್ಣನ ಮಗನ ಕುಕೃತ್ಯಕ್ಕೆ ಪಶ್ಚಾತಾಪವಿಲ್ಲವೇ: ಎಚ್‌ಡಿಕೆಗೆ ಕಾಂಗ್ರೆಸ್‌ನಿಂದ ಪ್ರಶ್ನೆಗಳ ಸುರಿಮಳೆ

Sampriya
ಶನಿವಾರ, 24 ಆಗಸ್ಟ್ 2024 (18:07 IST)
ಬೆಂಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಸಿಐಡಿ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ದೋಷಾರೋಷಣಾ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಟ್ವೀಟ್‌ ಮೂಲಕ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪ್ರಶ್ನೆಗಳ ಸವಾಲು ಹಾಕಿದೆ.

ಎಚ್‌.ಡಿ. ರೇವಣ್ಣ ಅವರು ಮಹಿಳೆಯ ಇಚ್ಚೆಗೆ ವಿರುದ್ಧವಾಗಿ ಕೈಹಿಡಿದು ಎಳೆದು, ಅವರ ಮೈ ಕೈಮುಟ್ಟಿ ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ. ಮಾಜಿ ಸಂಸದ ಪ್ರಜ್ವಲ್‌ ಅತ್ಯಾಚಾರ ನಡೆಸಿ, ವಿಡಿಯಿ ಚಿತ್ರೀಕರಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟದೆ ಎಂದೂ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

 ಕಾಂಗ್ರೆಸ್‌ ವಿರುದ್ಧ ಸದಾ ಕಿಡಿಕಾರುತ್ತಿರುವ ಕುಮಾರಸ್ವಾಮಿ ಅವರಿಗೆ ಈ ದೋಷಾರೋಷಣಾ ಪಟ್ಟಿಯಲ್ಲಿ ಮುಂದಿಟ್ಟುಕೊಂಡು ಪ್ರಶ್ನೆಗಳನ್ನು ಎಸೆಯಲಾಗಿದೆ.

ಕಾಂಗ್ರೆಸ್‌ ಟೀಟ್‌ನಲ್ಲಿ ಏನಿದೆ: ಕುಮಾರಸ್ವಾಮಿಯವರೇ,  ನಿಮ್ಮ ಕುಟುಂಬ ಸದಸ್ಯರ ಅನಾಚಾರಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ, ಇದಕ್ಕೊಂದು ಪತ್ರಿಕಾಗೋಷ್ಠಿ ನಡೆಸುವುದಿಲ್ಲವೇ?. ಪೊಲೀಸರು ಹಲವು ಆಯಾಮಗಳಲ್ಲಿ ಕೂಲಂಕುಶವಾಗಿ ತನಿಖೆ ನಡೆಸಿ ಕರಾಳ ಕೃತ್ಯವನ್ನು ತೆರೆದಿಟ್ಟಿದ್ದಾರೆ.

ವಿಡಿಯೋ ಬಿಡುಗಡೆ ಮಾಡಿದ್ದೇ ಮಹಾಪರಾಧ ಎಂದು ಒಂದೊಂದು ದಿನಕ್ಕೆ ಒಬ್ಬೊಬ್ಬರ ಮೇಲೆ ಆರೋಪ ಮಾಡುತ್ತಿದ್ದ ನೀವು, ತಮ್ಮ ಅಣ್ಣ, ಅಣ್ಣನ ಮಗನ ಈ ಕುಕೃತ್ಯದ ಬಗ್ಗೆ ಏಕೆ ಪಶ್ಚಾತಾಪ ಪಡುತ್ತಿಲ್ಲ? ತಮ್ಮ ಕುಟುಂಬದ ಈ ಮಹಾಪಾಪಕ್ಕೆ ತಲೆ ತಗ್ಗಿಸುತ್ತಿಲ್ಲ ಏಕೆ? ಎಂದು ಪ್ರಶ್ನೆಗಳನ್ನು ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ