'ಯಾರೂ ಏಕಪತ್ನಿ ವ್ರತಸ್ಥರಲ್ಲ' ಎಂದಿದ್ದಕ್ಕೂ ಈ ತಡೆಯಾಜ್ಞೆಗೂ ಸಂಬಂಧವಿದೆಯೇ

Sampriya
ಬುಧವಾರ, 28 ಆಗಸ್ಟ್ 2024 (16:06 IST)
Photo Courtesy X
ಬೆಂಗಳೂರು: ಮಾನಹಾನಿಕಾರ ಸುದ್ದಿ ಪ್ರಸಾರ ಮಾಡದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋರ್ಟ್ ಮೆಟ್ಟಿಲೇರುತ್ತಿದ್ದ ಹಾಗೇ ದಮ್ಮು ತಾಕತ್ತಿನ ಬಿಜೆಪಿ ನಾಯಕರು ಕ್ಯೂ ನಿಂತು ತಡೆಯಾಜ್ಞೆ ತರುತ್ತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬಿಜೆಪಿ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ಶೀಘ್ರ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳುತ್ತಿದ್ದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಕೋರ್ಟ್ ಮೊರೆ ಹೋಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸದ್ಯ ಬಸವರಾಜ ಬೊಮ್ಮಾಯಿ ನಡೆಯಿಂದ ಅವರ ವಿರುದ್ಧ ಏನಾದರೂ ಆರೋಪಗಳಿವೆ, ಯಾರಾದರೂ ಅವುಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರಾ, ಹೀಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದರ ಬೆನ್ನಲ್ಲೇ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಬಿಜೆಪಿಯವರನ್ನು ಪ್ರಶ್ನೆ ಮಾಡಿದೆ.

ದಮ್ಮು ತಾಕತ್ತಿನ ಬಿಜೆಪಿ ನಾಯಕರು ಕ್ಯೂ ನಿಂತು ತಡೆಯಾಜ್ಞೆ ತರುತ್ತಿರುವುದೇಕೆ?

ಮಾಜಿ ಮುಖ್ಯಮಂತ್ರಿ ಬಿಎಸ್‌ಬೊಮ್ಮಾಯಿ ಅವರೂ ಕೂಡ ತಮಗೆ ಸಂಬಂಧಿಸಿದ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತರಲು ಕೋರ್ಟ್ ಮೆಟ್ಟಿಲೇರಿದ ಸುದ್ದಿ ಬಂದಿದೆ,

ಬೊಮ್ಮಾಯಿಯವರಿಗೆ ಕಾಡುತ್ತಿರುವ ಭೀತಿಯಾದರೂ ಯಾವುದು? ಈ ಭೀತಿಗೆ ಕಾರಣವಾಗುವಂತಹ ಯಾವ ಘನಂದಾರಿ ಕೆಲಸ ಮಾಡಿದ್ದಾರೆ?

ಕೆ. ಸುಧಾಕರ್ ಅವರು 'ಯಾರೂ ಏಕಪತ್ನಿ ವ್ರತಸ್ಥರಲ್ಲ' ಎಂದಿದ್ದಕ್ಕೂ ಈ ತಡೆಯಾಜ್ಞೆಗೂ ಸಂಬಂಧವಿದೆಯೇ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments