ಜೆಡಿಎಸ್ ಜೊತೆ ಇದ್ದುಕೊಂಡೇ ಕಾಂಗ್ರೆಸ್ ನವರು ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸುತ್ತಾರೆ-ಈಶ್ವರಪ್ಪ ವ್ಯಂಗ್ಯ

Webdunia
ಸೋಮವಾರ, 1 ಏಪ್ರಿಲ್ 2019 (06:22 IST)
ಕೊಪ್ಪಳ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಇದ್ದ ಹಾಗೇ ಮಾಡಿ ಕಾಂಗ್ರೆಸ್ ಸಚಿವರೇ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸುತ್ತಾರೆ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಲು ಕಾಂಗ್ರೆಸ್ ನಾಯಕರು ಬಿಡಲ್ಲ. ನಿಖಿಲ್ ಸೋಲು ನಿಶ್ಚಿತವಾಗಿದ್ದು, ಸಿಎಂ ಕುಮಾರಸ್ವಾಮಿ ಅವರಿಗೆ ಸೋಲಿನ ಭಯ ಕಾಡುತ್ತಿದೆ. ಅದ್ದರಿಂದ ರಾಜ್ಯವನ್ನೇ ಬಿಟ್ಟು ಸಿಎಂ ಮಂಡ್ಯದಲ್ಲಿ ಸೀಮಿತವಾಗಿದ್ದು, ಎಚ್‍ಡಿಡಿ ಕುಟುಂಬಕ್ಕೆ ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳು ಒಂದು ದೇಶವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಅವರು ಸೋಲುತ್ತಾರೆ ಎಂದು ಹೇಳಿದ್ದಾರೆ.


 

ಸ್ವತಃ ಸಿದ್ದರಾಮಯ್ಯನವರೇ ದೇವೇಗೌಡರನ್ನು ಸೋಲಿಸಲು ನೇತೃತ್ವ ತೆಗೆದುಕೊಂಡಿದ್ದಾರೆ. ಏಕೆಂದರೆ ದೇವೇಗೌಡ ಅವರೇ ಸಿದ್ದರಾಮಯ್ಯರನ್ನು ಸೋಲಿಸಿದ್ರು. ಸಿದ್ದರಾಮಯ್ಯನವರ ಆಪ್ತರನ್ನು ಮೈಸೂರಿನಲ್ಲಿ ದೇವೇಗೌಡರು ಸೋಲಿಸುತ್ತಾರೆ. ಸಿದ್ದರಾಮಯ್ಯ ಶಿಷ್ಯರೇ ಅವರನ್ನು ಸೋಲಿಸುತ್ತಾರೆ. ಆ ಮೂಲಕ ಕೆಲ ಕಾಂಗ್ರೆಸ್ ಪಕ್ಷದವರು ನೇರವಾಗಿಯೇ ಬಿಜೆಪಿಗೆ ಬೆಂಬಲ ನೀಡಿದರೆ, ಮತ್ತು ಕೆಲವರು ಒಳಗೊಳಗೆ ಬಿಜೆಪಿ ಬೆಂಬಲ ನೀಡುತ್ತಾರೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments