Webdunia - Bharat's app for daily news and videos

Install App

ಇಸ್ಪೀಟ್ ಕ್ಲಬ್ ಮಾಲೀಕನ ಬರ್ಬರ ಕೊಲೆ

Webdunia
ಸೋಮವಾರ, 30 ಜುಲೈ 2018 (14:13 IST)
ಮಣಿಪಾಲ ಸಮೀಪದ ಇಸ್ಪೀಟ್ ಕ್ಲಬ್ ಒಂದರಲ್ಲಿ ತಂಡವೊಂದರ ಮಾಲಕನನ್ನು ಇರಿದು ಕೊಂದಿರುವ ಘಟನೆ ನಡೆದಿದೆ.

ಮೃತರನ್ನು ಉಡುಪಿಯ ಪುತ್ತೂರು ಗ್ರಾಮದ ಗುರುಪ್ರಸಾದ್ ಭಟ್ (45) ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಕ್ಲಬ್ ನಲ್ಲಿದ್ದ ವೇಳೆ ಓಮ್ನಿಯಲ್ಲಿ ಆಗಮಿಸಿದ ದುಷ್ಕರ್ಮಿಗಳು ಕ್ಲಬ್ ಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ನಂತರ ಅದೇ ಕಾರಿನಲ್ಲಿ ತಂಡ ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಗುರುಪ್ರಸಾದ್ ರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಗುರುಪ್ರಸಾದ್ ಹಣದ ವ್ಯವಹಾರವನ್ನೂ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಕೆಲ ವರ್ಷಗಳ ಹಿಂದೆ ಇವರುಸತ್ಯ ನ್ಯೂಸ್ಎಂಬ ವಾರ ಪತ್ರಿಕೆಯನ್ನೂ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮಣಿಪಾಲ ಇನ್ ಸ್ಪೆಕ್ಟರ್ ಸುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments