Webdunia - Bharat's app for daily news and videos

Install App

ಈಶ್ವರಪ್ಪನವರ ಅನುಭವ ನನ್ನ ವಯಸ್ಸಿಗಿಂತಲೂ ಹೆಚ್ಚಾಗಿದೆ: ಶೋಭಾ ಕರಂದ್ಲಾಜೆ

Webdunia
ಬುಧವಾರ, 29 ಜೂನ್ 2016 (13:07 IST)
ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪನವರ ಅನುಭವ ನನ್ನ ವಯಸ್ಸಿಗಿಂತಲೂ ಹೆಚ್ಚಾಗಿದೆ ಎಂದು ಉಡುಪಿ ಸಂಸದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
 
ಬಿಜೆಪಿಯಲ್ಲಿ ಪದಾಧಿಕಾರಿಗಳ ನೇಮಕ ಕುರಿತಂತೆ ಭುಗಿಲೆದ್ದಿರುವ ಭಿನ್ನಮತದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರನ್ನು ಪದಾಧಿಕಾರಿಗಳನ್ನಾಗಿ ಮಾಡಲು ಸಾಧ್ಯವೆ? ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಎಲ್ಲವನ್ನು ನೋಡಿಯೇ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾರೆ. ಪದಾಧಿಕಾರಿಗಳ ನೇಮಕದಲ್ಲಿ ಯಾವುದೇ ತಾರತಮ್ಯ ತೋರಿಲ್ಲ ಎಂದು ಸ್ಫಷ್ಟಪಡಿಸಿದ್ದಾರೆ.
 
ಅತೃಪ್ತ ಮಾಜಿ ಶಾಸಕರ ಸಭೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಕರಂದ್ಲಾಜೆ, ಯಡಿಯೂರಪ್ಪನವರ ಕಾರ್ಯದಲ್ಲಿ ನಾನು ಹಸ್ತಕ್ಷೇಪ ಮಾಡುತ್ತಿಲ್ಲ. ಇಂತಹ ಆರೋಪಗಳನ್ನು ಕೇಳಿ ಕೇಳಿ ನನ್ನ ಚರ್ಮ ದಪ್ಪವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪನವರು ಬಿಜೆಪಿ ಕಾರ್ಯಕರ್ತರ ಅರ್ಹತೆ ನೋಡಿ ಅವರಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ. ಅತೃಪ್ತ ಶಾಸಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments