Select Your Language

Notifications

webdunia
webdunia
webdunia
webdunia

ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ!?

ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ!?
ಬೆಳಗಾವಿ , ಮಂಗಳವಾರ, 12 ಏಪ್ರಿಲ್ 2022 (15:46 IST)
ಬೆಳಗಾವಿ : ನನ್ನ ಗಂಡ ಯಾವಾಗಲೂ ಬಿಜೆಪಿ ಕಾರ್ಯಕರ್ತ ಎಂದು ಎಲ್ಲರ ಬಳಿ ಹೇಳಿಕೊಳ್ಳುತ್ತಿದ್ದರು.

ಆದರೆ ಇಂದು ಅದೇ ಬಿಜೆಪಿ ನನ್ನ ಗಂಡನನ್ನು ಸಮಾಧಿ ಮಾಡಿಬಿಟ್ಟಿತು ಎಂದು ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಕಣ್ಣೀರು ಹಾಕಿದ್ದಾರೆ.

ಸಂತೋಷ್ ಪತ್ನಿ, ನನ್ನ ಪತಿ ಈಶ್ವರಪ್ಪ ಭರವಸೆ ಮೇಲೆಯೇ ಕೆಲಸ ಮಾಡುತ್ತಿದ್ದರು. ಕಳೆದ ವಾರದಿಂದ ಅವರು ಕಾಮಗಾರಿಯ ಬಿಲ್ ಪಾಸ್ ಮಾಡುತ್ತಿಲ್ಲ. ಶೇ.40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಎಂದಿದ್ದರು.

ಈ ವಿಚಾರವಾಗಿ ಈಶ್ವರಪ್ಪನ ಬಳಿ ಮಾತನಾಡಲು ಹೋದಾಗ ಬೆಳಗ್ಗೆ ಬನ್ನಿ, ಸಂಜೆ ಬನ್ನಿ ಎಂದು ಹೇಳಿ ಆಟ ಆಡಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದರು. 

ಬಿಜೆಪಿ ಸರ್ಕಾರಕ್ಕಾಗಿ ಕಷ್ಟ ಪಟ್ಟು ನನ್ನ ಪತಿ ಕೆಲಸ ಮಾಡುತ್ತಿದ್ದರು. ಕೆಲಸದ ಬರದಲ್ಲಿ ದಿನಕ್ಕೆ ಕೇವಲ ಒಂದೇ ಬಾರಿ ಊಟ ಮಾಡುತ್ತಿದ್ದರು. ಬಿಜೆಪಿಗಾಗಿ ನಿಯತ್ತಿನಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿಯನ್ನು ಅವರು ಈತ ಬಿಜೆಪಿ ಕಾರ್ಯಕರ್ತನೇ ಅಲ್ಲ. ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ ಎಂದಿದ್ದಾರೆ.

ಯಾರು ಎಂಬುದೇ ಗೊತ್ತಿಲ್ಲ ಎಂದಾದರೆ ಫೋಟೋದಲ್ಲಿ ಹೇಗೆ ತಾನೆ ಕಾಣಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ