Webdunia - Bharat's app for daily news and videos

Install App

ಐಟಿ, ಇಡಿ, ಸಿಬಿಐ ವಿರುದ್ಧ ಸಿಡಿದೆದ್ದ ಕೈ ಪಡೆ

Webdunia
ಶನಿವಾರ, 12 ಅಕ್ಟೋಬರ್ 2019 (18:48 IST)
ಕಾಂಗ್ರೆಸ್ ನಾಯಕರ ಮೇಲೆ ಕೇಂದ್ರ ಸರಕಾರವು ರಾಜಕೀಯ ದುರುದ್ದೇಶದಿಂದ ಇಡಿ, ಐಟಿ ಮತ್ತು ಸಿಬಿಐ ತನಿಖೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಹೀಗಂತ ಆರೋಪಿಸಿ ಕೈ ಪಡೆ ಪ್ರತಿಭಟನೆ ನಡೆಸಿದೆ.

ಮಂಡ್ಯ ಕೃಷ್ಣರಾಜಪೇಟೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು - ಚನ್ನರಾಯಪಟ್ಟಣ ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ಕೆಯುಐಡಿಎಫ್ ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ರು.  ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದ್ರು. ಗೃಹಸಚಿವ ಅಮಿತ್ ಷಾ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಪಿ.ಚಿದಂಬರಂ ಅವರ ವಿರುದ್ಧ ಈಗಾಗಲೇ ಸೇಡಿನ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಪ್ರಸ್ತುತ ಡಾ.ಜಿ.ಪರಮೇಶ್ವರ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಮೇಲೆ ಐಟಿ ದಾಳಿ ನಡೆಸಿದೆ. ಮಾನಸಿಕವಾಗಿ ಕಿರುಕುಳ ನೀಡಿ ಸಮಾಜದ ಮುಂದೆ ಕೆಟ್ಟ ಹೆಸರು ತರಲು ಸಂಚು ನಡೆಸಿದ್ದಾರೆ ಅಂತ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments