Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಸದ್ಯಕ್ಕೆ ತಪ್ಪಲ್ಲ ಬೀದಿ ನಾಯಿ ಹಾವಳಿ

Webdunia
ಶನಿವಾರ, 30 ಜುಲೈ 2022 (19:06 IST)
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದು ತಿಂಗಳಲ್ಲಿ ಸುಮಾರು 2 ಸಾವಿರ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರಲ್ಲಿ ಕೆಲವರಿಗೆ ರೇಬಿಸ್ ಲಕ್ಷಣಗಳು ಕೂಡ ಕಂಡುಬಂದಿವೆ. ಹೀಗಾಗಿ, ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಜನರು ಒತ್ತಾಯಿಸಿದ್ದರು. ಆದರೆ, ಬೀದಿ ನಾಯಿಗಳನ್ನು ಹಿಡಿದು ಬೆಂಗಳೂರಿನ ಆಶ್ರಯ ಮನೆಗಳಿಗೆ ಸ್ಥಳಾಂತರಿಸಲು ಕರ್ನಾಟಕ ಪಶುಸಂಗೋಪನಾ ಇಲಾಖೆ ನಿರಾಕರಿಸಿದೆ. ಇದಕ್ಕೆ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಪಶುಸಂಗೋಪನಾ ಇಲಾಖೆ ತನ್ನ ಹಿಂದಿನ ಆದೇಶವನ್ನು ಪುನರುಚ್ಛರಿಸಿದ್ದು, ಬೆಂಗಳೂರಿನ ಬೀದಿ ನಾಯಿಗಳು ಬೀದಿಯಲ್ಲಿಯೇ ಉಳಿಯುತ್ತವೆ ಎಂದು ಹೇಳಿದೆ. ಬೆಂಗಳೂರಿನಿಂದ ನಾಯಿಗಳನ್ನು ಸ್ಥಳಾಂತರಿಸದಿರಲು ಬಿಬಿಎಂಪಿ, ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ. ಬೀದಿ ನಾಯಿಗಳನ್ನು ಬೇರೆಡೆ ಶಿಫ್ಟ್ ಮಾಡಲು ಬೆಂಗಳೂರಿನ ನಿವಾಸಿಗಳು ಸಾಕಷ್ಟು ದೂರು ನೀಡಿದ್ದರು. ಆದರೂ ಅದಕ್ಕೆ ಬಿಬಿಎಂಪಿ ಒಪ್ಪಿಗೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments