Webdunia - Bharat's app for daily news and videos

Install App

ಚುನಾವಣೆಗೆ ಸಿದ್ದು ಕ್ಷೇತ್ರ ಬದಲಿಸುವುದು ಸರಿಯಲ್ಲ: ಸುಧಾಕರ್

Webdunia
ಗುರುವಾರ, 7 ಜುಲೈ 2022 (08:34 IST)
ಚಾಮರಾಜನಗರ : ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದವರು, ಅವರು ಚುನಾವಣೆಯಿಂದ ಚುನಾವಣೆಗೆ ಕ್ಷೇತ್ರ ಬದಲಿಸುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ಕೊಟ್ಟರು.

ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಅಗಿದ್ದ ಅವರನ್ನು 224 ಕ್ಷೇತ್ರದಲ್ಲೂ ಕರೆಯೋದು ಸರ್ವೇ ಸಾಮಾನ್ಯ.

ಅವರು ಸಿಎಂ ಆಗಿದ್ದವರು, ಅವರ ಜಿಲ್ಲೆಯಲ್ಲಿ ಕೈ ಬಿಟ್ಟರೂ ಬೇರೆ ಜಿಲ್ಲೆಯವರು ಕೈ ಹಿಡಿದರು. ಈಗ ಬಾದಾಮಿಯಿಂದಲೂ ಬೇರೆ ಕಡೆ ಹೋಗ್ತೀನಿ ಅಂದ್ರೆ ಯಾವ ಸಂದೇಶ ಕೊಡ್ತಾರೆ ಎಂದು ವ್ಯಂಗ್ಯವಾಡಿದರು.

ದೊಡ್ಡ ನಾಯಕರು, ಅಪಾರ ರಾಜಕೀಯ ಅನುಭವವುಳ್ಳವರು. ಇಂತವರು ಚುನಾವಣೆಯಿಂದ ಚುನಾವಣೆಗೆ ಬೇರೆ ಕ್ಷೇತ್ರ ಹುಡುಕುವುದು ಸರಿಯಲ್ಲ ಎಂದು ಟಾಂಗ್ ಕೊಟ್ಟರು. ಪಿಎಸ್ಐ ಅಕ್ರಮ ನೇಮಕಾತಿ ವಿಚಾರ ಸಂಬಂಧ ಗೃಹ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹದ ಬಗ್ಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ನೋಡಿದ್ದೇವೆ.

ಈ ರೀತಿ ಗಂಭೀರ ತನಿಖೆಯಾಗಿಲ್ಲ. ಹಿರಿಯ ಅಧಿಕಾರಿಗಳನ್ನ ಅರೆಸ್ಟ್ ಮಾಡಿರುವ ಯಾವುದಾದರೂ ಸರ್ಕಾರ ಇದ್ದರೆ ಅದು ಬಿಜೆಪಿ ಸರ್ಕಾರ. ಈ ವಿಚಾರವಾಗಿ ಮಾತನಾಡಲು ಕಾಂಗ್ರೆಸ್ ಅವರಿಗೆ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments