Webdunia - Bharat's app for daily news and videos

Install App

ಚುನಾವಣೆಗೆ ಸಿದ್ದು ಕ್ಷೇತ್ರ ಬದಲಿಸುವುದು ಸರಿಯಲ್ಲ: ಸುಧಾಕರ್

Webdunia
ಗುರುವಾರ, 7 ಜುಲೈ 2022 (08:34 IST)
ಚಾಮರಾಜನಗರ : ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದವರು, ಅವರು ಚುನಾವಣೆಯಿಂದ ಚುನಾವಣೆಗೆ ಕ್ಷೇತ್ರ ಬದಲಿಸುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ಕೊಟ್ಟರು.

ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಅಗಿದ್ದ ಅವರನ್ನು 224 ಕ್ಷೇತ್ರದಲ್ಲೂ ಕರೆಯೋದು ಸರ್ವೇ ಸಾಮಾನ್ಯ.

ಅವರು ಸಿಎಂ ಆಗಿದ್ದವರು, ಅವರ ಜಿಲ್ಲೆಯಲ್ಲಿ ಕೈ ಬಿಟ್ಟರೂ ಬೇರೆ ಜಿಲ್ಲೆಯವರು ಕೈ ಹಿಡಿದರು. ಈಗ ಬಾದಾಮಿಯಿಂದಲೂ ಬೇರೆ ಕಡೆ ಹೋಗ್ತೀನಿ ಅಂದ್ರೆ ಯಾವ ಸಂದೇಶ ಕೊಡ್ತಾರೆ ಎಂದು ವ್ಯಂಗ್ಯವಾಡಿದರು.

ದೊಡ್ಡ ನಾಯಕರು, ಅಪಾರ ರಾಜಕೀಯ ಅನುಭವವುಳ್ಳವರು. ಇಂತವರು ಚುನಾವಣೆಯಿಂದ ಚುನಾವಣೆಗೆ ಬೇರೆ ಕ್ಷೇತ್ರ ಹುಡುಕುವುದು ಸರಿಯಲ್ಲ ಎಂದು ಟಾಂಗ್ ಕೊಟ್ಟರು. ಪಿಎಸ್ಐ ಅಕ್ರಮ ನೇಮಕಾತಿ ವಿಚಾರ ಸಂಬಂಧ ಗೃಹ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹದ ಬಗ್ಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ನೋಡಿದ್ದೇವೆ.

ಈ ರೀತಿ ಗಂಭೀರ ತನಿಖೆಯಾಗಿಲ್ಲ. ಹಿರಿಯ ಅಧಿಕಾರಿಗಳನ್ನ ಅರೆಸ್ಟ್ ಮಾಡಿರುವ ಯಾವುದಾದರೂ ಸರ್ಕಾರ ಇದ್ದರೆ ಅದು ಬಿಜೆಪಿ ಸರ್ಕಾರ. ಈ ವಿಚಾರವಾಗಿ ಮಾತನಾಡಲು ಕಾಂಗ್ರೆಸ್ ಅವರಿಗೆ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments