Select Your Language

Notifications

webdunia
webdunia
webdunia
Friday, 11 April 2025
webdunia

ಪೋಷಕರು ವಿದ್ಯಾಭ್ಯಾಸ ಮುಂದುವರಿಸಲು ಹೇಳಿದ್ದಕ್ಕೆ ವಿದ್ಯಾರ್ಥಿನಿ ಮಾಡಿಕೊಂಡಿದ್ದಾಳೆ ಇಂತಹ ಅನಾಹುತ

ಮಡಿಕೇರಿ
ಮಡಿಕೇರಿ , ಭಾನುವಾರ, 27 ಜನವರಿ 2019 (07:40 IST)
ಮಡಿಕೇರಿ : ಪೋಷಕರು ಶಿಕ್ಷಣ ಮುಂದುವರಿಸಲು ಒತ್ತಾಯಿಸಿದ್ದಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ವತೋಕ್ಲು-ಮೈಸೂರಮ್ಮ ನಗರದಲ್ಲಿ ನಡೆದಿದೆ.


ದರ್ಶಿನಿ(18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ  ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡ್ತಿದ್ದಳು. ಪೋಷಕರ ಒತ್ತಾಯದ ಮೇರೆಗೆ ಕಾಲೇಜಿಗೆ ಹೋಗುತ್ತಿದ್ದ ದರ್ಶಿನಿ ಶಿಕ್ಷಣಕ್ಕೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿದ್ದಳು. ಆದರೆ ಆಕೆಯ ನಿರ್ಧಾರವನ್ನು ಪೋಷಕರು ವಿರೋಧಿಸಿ ಶಿಕ್ಷಣ ಮುಂದುವರಿಸುವಂತೆ  ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ದರ್ಶಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ  ಬರೆಯಲಾಗಿದೆ. ಗೋಣಿಕೊಪ್ಪಲು ಪೊಲೀಸ್ ಠಾಣಾಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಜ್ಜಾ ತಣ್ಣಗಾಗಿದಕ್ಕೆ ಡೆಲಿವರಿ ಬಾಯ್ ಗೆ ಗುಂಡು ಹಾರಿಸಿದ ಕಾನೂನು ವಿದ್ಯಾರ್ಥಿ