Publish Date: Fri, 05 Jun 2026 (19:00 IST)
Updated Date: Fri, 05 Jun 2026 (19:02 IST)
ಬೆಂಗಳೂರು: ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಮಾತು ಕೊಟ್ಟಿದ್ದು ನಿಜ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ರಾಮಲಿಂಗಾರೆಡ್ಡಿಗೆ ನಾವು ಮಾತು ಕೊಟ್ಟಿದ್ದು ನಿಜ. ನಾನು ನನ್ನ ತಮ್ಮ ಹೋಗಿ ಮಾತು ಕೊಟ್ಟಿದ್ದೇವು ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೇ ಖಾತೆ ಕೈತಪ್ಪಿರುವುದಕ್ಕೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ.
'ರಾಮಲಿಂಗಾರೆಡ್ಡಿ ಅವರು ಅತ್ಯಂತ ಹಿರಿಯ ನಾಯಕರು. ನಾನು ಅವರಿಗೆ ಒಂದು ಖಾತೆ ನೀಡುವ ಬಗ್ಗೆ ಮಾತು ಕೊಟ್ಟಿದ್ದು ನಿಜ. ಸಾರಿಗೆ ಇಲಾಖೆಯ ಜೊತೆಗೆ ಬೇರೆಯವರುಗೆ ಕೊಟ್ಟಿದ್ದ ಮುಜರಾಯಿ ಖಾತೆಯನ್ನು ಇವರಿಗೆ ಕೊಡಿಸಿದ್ದೆವು. ಆದರೆ ಈಗ ಹೈಕಮಾಂಡ್ ತೀರ್ಮಾನದಂತೆ ಕೃಷ್ಣಬೈರೇಗೌಡರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲಾಗಿದೆ. ಈ ಬೆಳವಣಿಗೆ ಬಳಿಕ ರಾಮಲಿಂಗಾ ರೆಡ್ಡಿಗೆ ಖಾತೆ ಕೊಡಿಸಲು ಪ್ರಯತ್ನ ಪಟ್ಟಿದ್ದೆ, ಆದರೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ