ಸಿಬಿಐನಿಂದ ರದ್ದಾದ ಗಣಿ ಕೇಸ್ ತನಿಖೆ ಎಸ್ಐಟಿ ಮಾಡುತ್ತಿರುವುದು ಸ್ವಾಗತಾರ್ಹ: ಡಿಕೆಶಿ

Webdunia
ಶನಿವಾರ, 4 ನವೆಂಬರ್ 2017 (19:32 IST)
ಬೆಂಗಳೂರು: ಗಣಿ ಅಕ್ರಮದ ವಿಷಯವಾಗಿ ಸಿಬಿಐ ಪ್ರಕರಣ ರದ್ದು ಮಾಡಿದ್ದರೂ ಈಗ ಸರ್ಕಾರ ಎಸ್ಐಟಿ ತನಿಖೆಗೆ ಮುಂದಾಗಿರುವುದು ಸ್ವಾಗತಿಸುತ್ತೇನೆ. ಪ್ರಾಕೃತಿಕ ಸಂಪತ್ತು ರಕ್ಷಣೆಗೆ ಇದು ಅಗತ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಇಂಧನ ‌ಖರೀದಿ ಅವ್ಯವಹಾರ ತನಿಖೆಯ ಸದನ ಸಮಿತಿಗೆ ತಮ್ಮ ಅಭಿಪ್ರಾಯವನ್ನು‌ ಕೊಟ್ಟಾಗಿದೆ. ಈಗ ಕೊನೆಯ ಹಂತದಲ್ಲಿ ನ. 7 ರಂದು ಸಭೆಗೆ ಬರಬೇಕು. ಇಲ್ಲವಾದರೆ ಸಮಿತಿ ಯಾವ ಶಿಫಾರಸ್ಸು ಮಾಡಿದೆ. ಸಮಿತಿಯ ಅಂತಿಮ‌ ಅಭಿಪ್ರಾಯ ಏನು ಎಂದು ಅವರಿಗೆ ತಿಳಿಯುವುದಿಲ್ಲ ಎಂದರು.

ನನ್ನ ಹಾಗೂ ಆಪ್ತರ ಮೇಲೆ ಐಟಿ ದಾಳಿ ಆಗುತ್ತಿರುವುದು ನಿಜ. ಕಾನೂನಿಗೆ ತಲೆಬಾಗಿ ಐಟಿ ತನಿಖೆಗೆ ಸಹಕರಿಸಿದ್ದೇನೆ. ಅವರು ಕರೆದಾಗಲೆಲ್ಲಾ ಹೋಗಿ ಮಾಹಿತಿ ನೀಡಿದ್ದೇನೆ. ಮುಂದಿನ ವಾರ ವಿಚಾರಣೆಗೆ ಕರೆದಿದ್ದು, ಹೋಗುತ್ತೇನೆ. ಕಾನೂನಿನ‌ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಮೌನವಾಗಿದ್ದೇನೆ. ಒಂದೆರಡು ದಿನಗಳಾಗಲಿ. ನಂತರ ಎಲ್ಲವೂ ಬಹಿರಂಗವಾಗುತ್ತದೆ ಎಂದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments