Webdunia - Bharat's app for daily news and videos

Install App

ಐಟಿ ಅಧಿಕಾರಿ ಮಗನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ

Webdunia
ಗುರುವಾರ, 14 ಸೆಪ್ಟಂಬರ್ 2017 (15:35 IST)
ದುಷ್ಕರ್ಮಿಗಳು ಐಟಿ ಅಧಿಕಾರಿ ಪುತ್ರನನ್ನೇ ಬಂಧಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪಹರಣವಾದ ಹುಡುಗನ ಕೈಯಲ್ಲೇ ವಾಟ್ಸಾಪ್ ವಿಡಿಯೋ ಮಾಡಿಸಿ ಕಳುಹಿಸಿರುವ ದುಷ್ಕರ್ಮಿಗಳು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಕೆಂಗೇರಿಯ ಉಳ್ಳಾಲದ ನಿರಂಜನ್ ಎಂಬುವವರ ಪುತ್ರ 19 ವರ್ಷದ ಶರತ್ ಅಪಹರಣಕ್ಕೀಡಾದ ಯುವಕ. 2 ದಿನಗಳ ಹಿಂದೆಯೇ ಈ ಅಪಹರಣ ಪ್ರಕರಣ ನಡೆದಿದೆ. ಮಾಧ್ಯಮಗಳಿಗೆ ಸಿಕ್ಕಿರುವ ವಿಡಿಯೋದಲ್ಲಿ ಮಾತನಾಡಿರುವ ಯುವಕ, ಇವರು ನನಗೆ ತುಂಬಾ ಟಾರ್ಚರ್ ಕೊಡುತ್ತಿದ್ದಾರೆ. ಅವರು ಕೇಳಿದಷ್ಟು ಅಡ್ಜೆಸ್ಟ್ ಮಾಡಿ ತಂದು ಕೊಡಿ ಎಂದು ಗೋಗರೆಯುತ್ತಾನೆ. ಪಕ್ಕದಲ್ಲಿರುವ ಅಪಹರಣಕಾರರು ಯುವಕನಿಗೆ ಹೇಳಿ ಕೊಡುತ್ತಿರುವುದು ಪತ್ತೆಯಾಗಿದೆ.

ಶರತ್ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದಾನೆ, ಹಣದ ಬೇಡಿಕೆ ಇಟ್ಟಿರುವ ವಾಟ್ಸಾಪ್ ವಿಡಿಯೋ ತಂದೆ ತಾಯಿ ಮತ್ತು ಸೋದರನಿಗೆ ಕಳುಹಿಸಲಾಗಿದ್ದು, ಜ್ಞಾನಭಾರತಿ ಭಾರತಿ ಠಾಣೆ ಪೊಲಿಸರು ವಾಟ್ಸಾಪ್ ವಿಡಿಯೋ ಮೂಲ ಆಧರಿಸಿ ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

ಮುಂದಿನ ಸುದ್ದಿ
Show comments