Webdunia - Bharat's app for daily news and videos

Install App

ಸಿಎಂ, ಡಿಕೆಶಿ ಕೊಠಡಿ ಮೇಲೆ ಐಟಿ ರೇಡ್

Webdunia
ಮಂಗಳವಾರ, 14 ಮೇ 2019 (13:11 IST)
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ ಸೇರಿದಂತೆ ಸಾಕಷ್ಟು ಜಾಗಗಳಲ್ಲಿ ತಪಾಸಣೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದರು. ಕೆಲವು ಕಡೆ ಹಣ, ಆಸ್ತಿ ಸಿಗದಿದ್ದರೂ ಕೆಲವು ಕಡೆ ಒಳ್ಳೆ ಕುಳಗಳೇ ಬಲೆಗೆ ಬಿದ್ದಿದ್ದವು. ಆದರೆ ಈ ಬಾರಿ ತೆರಿಗೆ ಅಧಿಕಾರಿಗಳು ಏನೂ ಸಿಗದೇ ಬರಿಗೈಲಿ ವಾಪಸ್ ಹೋಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಂಗಿರುವ ಗೋಕುಲ ರಸ್ತೆಯ ಡಿನಿಸನ್ಸ್ ಹೊಟೇಲ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅವರು ತಂಗಿರುವ ಕಾಟನ್ ಕೌಂಟಿ ಕ್ಲಬ್ ಕೊಠಡಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ನು ಸಚಿವ ಜಮೀರ್ ಅಹ್ಮದ್ ಖಾನ್, ಆರ್.ವಿ. ದೇಶಪಾಂಡೆ, ಎಂಎಲ್‌ಸಿ ನಾಸೀರ್ ಅಹ್ಮದ್, ಸಂತೋಷ್ ಲಾಡ್, ಎಂ.ಟಿ.ಬಿ ನಾಗರಾಜ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವಾಸ್ತವ್ಯ ಹೂಡಿರುವ ಕೊಠಡಿಗಳನ್ನೂ ತಲಾಶ್ ನಡೆಸಿದ್ದಾರೆ.

ಹೊಟೇಲ್ ದಾಖಲೆಗಳನ್ನು ವಶಕ್ಕೆ ಪಡೆದರು. ಗೋವಾ ಮತ್ತು ಬೆಳಗಾವಿ ಭಾಗದ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ವಾರ್ಡ್‌ರೋಬ್, ಟೇಬಲ್, ಕಾಟ್‌ಗಳನ್ನೂ ಬಿಡದೆ ಪರಿಶೀಲನೆ ಮಾಡಿದ್ದಾರೆ. ಈ ದಾಳಿಯಲ್ಲಿ ಅಧಿಕಾರಿಗಳ ಕೈಗೆ ಏನಾದ್ರು ಸಿಕ್ಕಿದ್ಯಾ ಅನ್ನೋ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಒಟ್ಟಾರೆ, ಲೋಕಸಭೆ ಚುನಾವಣೆ ವೇಳೆ ಶುರುವಾದ ಐಟಿ ದಾಳಿ ಮಿನಿ ಸಮರದಲ್ಲೂ ಮುಂದುವರಿದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments