Webdunia - Bharat's app for daily news and videos

Install App

ಚಿತ್ರನಟರ ಮೇಲೆ ಐಟಿ ರೇಡ್: ಡಿಸಿಎಂ ಪರಮೇಶ್ವರ ಹೇಳಿದ್ದೇನು?

Webdunia
ಶನಿವಾರ, 5 ಜನವರಿ 2019 (18:39 IST)
ಸ್ಯಾಂಡಲ್ ವುಡ್ ನಟರ ಹಾಗೂ ನಿರ್ಮಾಪಕರ ಮೇಲೆ ನಡೆದ ಐಡಿ ರೇಡ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್ ವುಡ್ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ ರೇಡ್ ನಡೆದಿರುವುದಕ್ಕೆ ಡಿಸಿಎಂ ರಿಯಾಕ್ಷನ್ ನೀಡಿದ್ದು, ಯಾವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂಬುದು ಗೊತ್ತಿಲ್ಲ. ಅವರು ತೆರಿಗೆಯನ್ನು ಕಟ್ಟಿಲ್ಲ ಅನ್ನೋ ಉದ್ದೇಶದಿಂದ ದಾಳಿ ನಡೆದಿದ್ದರೆ ಅದು ಸರಿ ಎಂದರು.

ಬೇರೆ ಉದ್ದೇಶದಿಂದ ದಾಳಿ ನಡೆಸಿದ್ದರೆ ಸರಿಯಲ್ಲ ಎಂದ ಅವರು, ಮೊದಲಿನಿಂದಲೂ ನಾವು ಹೇಳಿಕೊಂಡು‌ ಬಂದಿದ್ದೇವೆ. ಕಾಂಗ್ರೆಸ್ ನವರನ್ನು ಹಾಗೂ ಕಾಂಗ್ರೆಸ್ ಬೆಂಬಲಿಗರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು. ಕಾನೂನಾತ್ಮಕವಾಗಿ ದಾಳಿ ನಡೆಸಿದ್ದರೆ ನಮ್ಮದೇನು ತಕರಾರಿಲ್ಲ ಎಂದು ಹೇಳಿದರು.

ಅದನ್ನು ಹೊರತುಪಡಿಸಿ ದಾಳಿ ನಡೆಸಿದರೆ ತಪ್ಪು ಎಂದ ಉಪಮುಖ್ಯಮಂತ್ರಿ ಪರಮೇಶ್ವರ್, ಆದರೆ ಒಂದು ವರ್ಗಕ್ಕೆ ದಾಳಿ ಸೀಮಿತವಾಗಿರಬಾರದು. ಯಾರ ಸೂಚನೆ ಮೇಲೆ ದಾಳಿ ನಡೆದಿದೆ ಎಂದು ಗೊತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments