Publish Date: Wed, 02 Aug 2017 (11:05 IST)
Updated Date: Wed, 02 Aug 2017 (11:08 IST)
ನವದೆಹಲಿ: ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ನಡೆದ ಐಟಿ ದಾಳಿಗಳ ಬೆನ್ನಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ್ದು, ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರ ಮೇಲೆ ನಡೆಯುತ್ತಿರುವ ಐಟಿ ದಾಳಿಗೆ ಪ್ರತಿಯಾಗಿ ಹೋರಾಡಿ ಎಂದು ಸಿಎಂ ಸಿದ್ದುಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಡಿಕೆ ಶಿವಕುಮಾರ್ ಬೆಂಬಲಕ್ಕೆ ಇಡೀ ಕಾಂಗ್ರೆಸ್ ಪಕ್ಷವೇ ನಿಂತಿದೆ.
ಇನ್ನೊಂದೆಡೆ ಸಂಸತ್ತಿನಲ್ಲಿ ಮಾತನಾಡಿದ ಸಚಿವ ಅನಂತ್ ಕುಮಾರ್ ‘ಇದರಲ್ಲಿ ಬಿಜೆಪಿ ಪಾತ್ರವೇನೂ ಇಲ್ಲ. ಆದರೆ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ತೆರಿಗೆ ಅಧಿಕಾರಿಗಳಿಗೆ ಸಿಕ್ಕಿದ ನಗದು, ದಾಖಲೆಗಳ ಬಗ್ಗೆ ಕಾಂಗ್ರೆಸ್ ದೇಶದ ಜನತೆಗೆ ಉತ್ತರಿಸಬೇಕಿದೆ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ