Webdunia - Bharat's app for daily news and videos

Install App

ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

Webdunia
ಮಂಗಳವಾರ, 19 ಸೆಪ್ಟಂಬರ್ 2023 (14:16 IST)
ಬೆಂಗಳೂರು : ಹಿಂದೆ ಏನಾಯಿತು ಎಂಬುದು ಮುಖ್ಯ ಅಲ್ಲ, ಇವತ್ತು ಏನಾಯಿತು ಎಂಬುದು ಮುಖ್ಯ. ನೀರಿನ ವಿಚಾರ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಒಗ್ಗಟ್ಟಾಗಿ ಇರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಾವೇರಿ ಜಲವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಕೆಲವು ತೀರ್ಮಾನ ತೆಗೆದುಕೊಂಡಿತ್ತು. ಈ ಬೆಳವಣಿಗೆ ನಂತರ ಸಿಎಂ, ಡಿಸಿಎಂ ಕುಳಿತು ಒಂದು ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಪರವಾಗಿ ಏನೇನು ತೀರ್ಮಾನ ತೆಗೆದುಕೊಳ್ಳಬೇಕು. ಅದನ್ನು ನಮ್ಮ ಸರ್ಕಾರ ಖಂಡಿತಾ ಮಾಡುತ್ತದೆ. ಇದರಲ್ಲಿ ಯಾವುದೇ ಅನುಮಾನ ಪಡುವಂತದ್ದು ಇಲ್ಲ ಎಂದರು.

ಒಂದೊಂದು ಸನ್ನಿವೇಶದಲ್ಲಿ ಒಂದೊಂದು ಬೇಡಿಕೆ ಬರುತ್ತಿರುತ್ತವೆ. ಮಳೆ ಕಡಿಮೆಯಾದಾಗ ಬೇಡಿಕೆಗಳು ಹೆಚ್ಚಾಗುತ್ತದೆ. ಬೇಡಿಕೆಗಳು ಹೆಚ್ಚಾದಾಗ ಒತ್ತಡಗಳು ಬರುತ್ತವೆ. ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ ಪಾದಯಾತ್ರೆ ಮಾಡಿದ್ವಿ, ನೀರು ಕೊಡಲು ಆಗಲ್ಲ ಎಂದು ಹೇಳಬೇಕಾಗಿತ್ತು.

ತಮಿಳುನಾಡು – ಕರ್ನಾಟಕ ನಡುವೆ ಸಾಕಷ್ಟು ವ್ಯಾಜ್ಯಗಳು ನಡೆದಿವೆ. ಈಗ ಪ್ರಾಧಿಕಾರ ರಚನೆ ಆಗಿದೆ. ಒಂದೆಡೆ ಕಾನೂನಾತ್ಮಕ ಹೋರಾಟ ಮಾಡ್ತೇವೆ. ಪ್ರಾಧಿಕಾರ ರಚನೆ ಸಂಪೂರ್ಣ ನಿಯಂತ್ರಣ ಅದಕ್ಕೆ ನೀಡಲಾಗಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಮುಂದಿನ ಸುದ್ದಿ
Show comments