ಮುಂದಿನ ದಸರಾ ವೇಳೆಗೆ ಬೆಂಗಳೂರಿನಿಂದ ಮೈಸೂರಿಗೆ ಹೋಗಲು 90 ನಿಮಿಷ ಸಾಕು..!

Webdunia
ಸೋಮವಾರ, 16 ಆಗಸ್ಟ್ 2021 (15:58 IST)
ಬೆಂಗಳೂರು(ಆ.16): ಸಾಕಷ್ಟು ವಿಳಂಬದ ನಂತರ ಈ ಹೆದ್ದಾರಿಯ ಅಗಲೀಕರಣವು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ತಗಲುವ ಅಂದಾಜು ವೆಚ್ಚ 7400 ಕೋಟಿ ರೂ. ಆಗಿದೆ. ಈಗಾಗಲೇ ವಿಳಂಬಗೊಂಡಿರುವ ಬೆಂಗಳೂರು-ಮೈಸೂರು ಹೆದ್ದಾರಿಯ ಅಗಲೀಕರಣವು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹೇಳಿರುವಂತೆ ಮೈಸೂರು - ನಿಡಘಟ್ಟ (56.2 ಕಿಲೋಮೀಟರ್) ರಸ್ತೆ ಅಗಲೀಕರಣದ (47 ಕಿಲೋಮೀಟರ್) ಪ್ರಾಜೆಕ್ಟ್ 80.49 ಶೇಕಡಾ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
ಯೋಜನೆಯ ಮೊದಲ ಪ್ಯಾಕೇಜ್ ಘೋಷಣೆಯಾದೊಡನೆಯೇ ಈ ಯೋಜನೆಯು ಕ್ಷಿಪ್ರಗತಿಯಲ್ಲಿ ಆರಂಭಗೊಂಡಿತು. 2ನೇ ಪ್ಯಾಕೇಜ್ ನಿಡಘಟ್ಟ-ಮೈಸೂರು ರಸ್ತೆ ಅಗಲೀಕರಣಕ್ಕೆ (61.1 ಕಿಲೋಮೀಟರ್ಗಳು) ಘೋಷಿಸಲಾಯಿತು. ರಸ್ತೆ ಅಗಲೀಕರಣದ ಕಾರ್ಯವು ಆಮೆಗತಿಯಲ್ಲಿ ಸಾಗಿದ್ದು ಒಟ್ಟು 29.78 ಕಿಲೋಮೀಟರ್ಗಳಷ್ಟು ಕಾರ್ಯ ಮಾತ್ರ ಪೂರ್ಣಗೊಂಡಿದೆ. ಇದರಿಂದ ರಸ್ತೆ ಅಗಲೀಕರಣ ಕಾಮಗಾರಿ ಅರ್ಧದಲ್ಲಿಯೇ ನಿಂತಿದೆ. ಈ ಯೋಜನೆಯ ಒಟ್ಟು 73.7% ಪೂರ್ಣಗೊಂಡಿದ್ದು, ಮುಂದಿನ ವರ್ಷ ಅಕ್ಟೋಬರ್ನಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಕೋವಿಡ್ ಕಾರಣ ಅರ್ಧಕ್ಕೆ ನಿಂತಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಪುನಃ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫ್ಲೈಓವರ್ಗಳು ಮುಕ್ತಾಯ ಹಂತಕ್ಕೆ ಬಂದಿದ್ದು ಕೆಂಗೇರಿ ಹಾಗೂ ಕುಂಬಳಗೋಡು ನಡುವೆಯೂ ಫ್ಲೈಓವರ್ ಬರಲಿದೆ. ಈ ಹಿಂದೆ ಈ ರಸ್ತೆಯು ಹೆಚ್ಚಿನ ತಿರುವುಗಳನ್ನು ಒಳಗೊಂಡಿತ್ತು. ಆದರೆ ಈಗ ರಸ್ತೆಯನ್ನು ನೇರಗೊಳಿಸಲಾಗಿದೆ. ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments