Webdunia - Bharat's app for daily news and videos

Install App

ಮುಂದಿನ ದಸರಾ ವೇಳೆಗೆ ಬೆಂಗಳೂರಿನಿಂದ ಮೈಸೂರಿಗೆ ಹೋಗಲು 90 ನಿಮಿಷ ಸಾಕು..!

Webdunia
ಸೋಮವಾರ, 16 ಆಗಸ್ಟ್ 2021 (15:58 IST)
ಬೆಂಗಳೂರು(ಆ.16): ಸಾಕಷ್ಟು ವಿಳಂಬದ ನಂತರ ಈ ಹೆದ್ದಾರಿಯ ಅಗಲೀಕರಣವು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ತಗಲುವ ಅಂದಾಜು ವೆಚ್ಚ 7400 ಕೋಟಿ ರೂ. ಆಗಿದೆ. ಈಗಾಗಲೇ ವಿಳಂಬಗೊಂಡಿರುವ ಬೆಂಗಳೂರು-ಮೈಸೂರು ಹೆದ್ದಾರಿಯ ಅಗಲೀಕರಣವು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹೇಳಿರುವಂತೆ ಮೈಸೂರು - ನಿಡಘಟ್ಟ (56.2 ಕಿಲೋಮೀಟರ್) ರಸ್ತೆ ಅಗಲೀಕರಣದ (47 ಕಿಲೋಮೀಟರ್) ಪ್ರಾಜೆಕ್ಟ್ 80.49 ಶೇಕಡಾ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
ಯೋಜನೆಯ ಮೊದಲ ಪ್ಯಾಕೇಜ್ ಘೋಷಣೆಯಾದೊಡನೆಯೇ ಈ ಯೋಜನೆಯು ಕ್ಷಿಪ್ರಗತಿಯಲ್ಲಿ ಆರಂಭಗೊಂಡಿತು. 2ನೇ ಪ್ಯಾಕೇಜ್ ನಿಡಘಟ್ಟ-ಮೈಸೂರು ರಸ್ತೆ ಅಗಲೀಕರಣಕ್ಕೆ (61.1 ಕಿಲೋಮೀಟರ್ಗಳು) ಘೋಷಿಸಲಾಯಿತು. ರಸ್ತೆ ಅಗಲೀಕರಣದ ಕಾರ್ಯವು ಆಮೆಗತಿಯಲ್ಲಿ ಸಾಗಿದ್ದು ಒಟ್ಟು 29.78 ಕಿಲೋಮೀಟರ್ಗಳಷ್ಟು ಕಾರ್ಯ ಮಾತ್ರ ಪೂರ್ಣಗೊಂಡಿದೆ. ಇದರಿಂದ ರಸ್ತೆ ಅಗಲೀಕರಣ ಕಾಮಗಾರಿ ಅರ್ಧದಲ್ಲಿಯೇ ನಿಂತಿದೆ. ಈ ಯೋಜನೆಯ ಒಟ್ಟು 73.7% ಪೂರ್ಣಗೊಂಡಿದ್ದು, ಮುಂದಿನ ವರ್ಷ ಅಕ್ಟೋಬರ್ನಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಕೋವಿಡ್ ಕಾರಣ ಅರ್ಧಕ್ಕೆ ನಿಂತಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಪುನಃ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫ್ಲೈಓವರ್ಗಳು ಮುಕ್ತಾಯ ಹಂತಕ್ಕೆ ಬಂದಿದ್ದು ಕೆಂಗೇರಿ ಹಾಗೂ ಕುಂಬಳಗೋಡು ನಡುವೆಯೂ ಫ್ಲೈಓವರ್ ಬರಲಿದೆ. ಈ ಹಿಂದೆ ಈ ರಸ್ತೆಯು ಹೆಚ್ಚಿನ ತಿರುವುಗಳನ್ನು ಒಳಗೊಂಡಿತ್ತು. ಆದರೆ ಈಗ ರಸ್ತೆಯನ್ನು ನೇರಗೊಳಿಸಲಾಗಿದೆ. ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments