Webdunia - Bharat's app for daily news and videos

Install App

ನಮ್ಮನೆ ಸುಟ್ಟಿದ್ದು ರಜಾಕರ್‌ಗಳು, ಮುಸ್ಲಿಮರಲ್ಲ: ಯೋಗಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಕೌಂಟರ್‌

Sampriya
ಬುಧವಾರ, 13 ನವೆಂಬರ್ 2024 (19:35 IST)
Photo Courtesy X
ಬೆಂಗಳೂರು: ನಮ್ಮ ಮನೆ ಸುಟ್ಟಿರೋದು ರಜಾಕರ್‌ಗಳು,  ಮುಸ್ಲಿಮರಲ್ಲ ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೌಂಟರ್‌ ಕೊಟ್ಟಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ಅವರಿಗೆ ಖರ್ಗೆ ಸಾಹೇಬರ ಇತಿಹಾಸ ಗೊತ್ತಿಲ್ಲ. ನಮ್ಮನೆ ಸುಟ್ಟು ಹಾಕಿದ್ದು ರಝಾಕರು, ಮುಸ್ಲಿಮರಲ್ಲ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ ನಡೆಸಿದ್ದಾರೆ.

ಈಚೆಗೆ ಯೋಗಿ  ಆದಿತ್ಯನಾಥ್ ಅವರು ರಝಾಕರಿಂದ ಖರ್ಗೆಯವರ ತಾಯಿ, ಸಹೋದರಿ ಸುಟ್ಟು ಹೋದರೂ, ಈ ಬಗ್ಗೆ ಖರ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದರು.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು,  ಸುಟ್ಟಿದ್ದು ನಮ್ಮನೆ, ಜೀವ ಹೋಗಿದ್ದು ನಮ್ಮವರದ್ದು, ಇದರಿಂದ ಯೋಗಿಗೆ ಏನಾಗಬೇಕು? ಆ ಘಟನೆಗೆ ಇಡೀ ಮುಸ್ಲಿಂ ಸಮುದಾಯವನ್ನು ದೂರುವುದಕ್ಕೆ ಆಗುತ್ತಾ ಎಂದು ಕಿಡಿಕಾರಿದರು.

ಒಂದು ಸಮುದಾಯದ ಕೆಲವರಿಂದ ಮೋಸ ಆಗುತ್ತೆ ಎಂದಾದರೆ  ಇಡೀ ಸಮುದಾಯವನ್ನು ಹೊಣೆ ಮಾಡಲಾಗುತ್ತಾ? ಹಾಗೆಯೇ ಇದರಲ್ಲಿ ಇಡೀ ಮುಸ್ಲಿಮರಿಗೆಲ್ಲ ಆರೋಪ ಮಾಡಲು ಆಗುತ್ತಾ? ಇದೆಲ್ಲ ಈಗ ಅಪ್ರಸ್ತುತ ಚರ್ಚೆ. ಇಷ್ಟೆಲ್ಲಾ ಮಾತನಾಡುವ ಇವರು ದಲಿತರಿಗೆ ದೇವಸ್ಥಾನಗಳಿಗೆ ಪ್ರವೇಶ ಕೊಡುತ್ತಾರಾ ಎಂದು ಪ್ರಶ್ನಿಸಿದರು.

ಮೊದಲು ಬಿಜೆಪಿ, ಆರ್‌ಎಸ್‌ಎಸ್ ಸಿದ್ಧಾಂತಗಳಲ್ಲಿ ಸಮಾನತೆ ತರಲಿ. ಬಿಜೆಪಿಯವರು ಅಪಾಯದಲ್ಲಿದ್ದರೆ ಮಾತ್ರ ಆಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬಿಂಬಿಸುತ್ತಾರೆ. ನಿಜಕ್ಕೂ ಅಪಾಯದಲ್ಲಿ ಇರೋರು ಬಿಜೆಪಿಯವರು, ಹಿಂದೂಗಳಲ್ಲ. ತಾವು ಅಪಾಯದಲ್ಲಿ ಇದ್ದಾಗ ಹಿಂದೂಗಳ ಹೆಸರು ಬಳಸಿಕೊಳ್ಳುತ್ತಾರೆ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments