ಐಟಿಐ ಪಾಸಾದವರಿಗೆ ಆಕ್ಸಿಜನ್‌ ಘಟಕಗಳ ನಿರ್ವಹಣೆ: ಡಿಸಿಎಂ

Webdunia
ಗುರುವಾರ, 22 ಜುಲೈ 2021 (14:52 IST)
ಬೆಂಗಳೂರು: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್‌ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ವರ್ಚು
ಯೆಲ್ ಆನ್‌ಲೈನ್‌ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್‌ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದುವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವುಗಳ ನಿರ್ವಹಣೆಯ ಹೊಣೆಯನ್ನು ಐಟಿಐ ವಿದ್ಯಾರ್ಥಿಗಳಿಗೆ ವಹಿಸುವುದು ಉತ್ತಮ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಹಳೆಯ ಸ್ಥಿತಿಯಲ್ಲಿರುವ 150 ಐಟಿಐಗಳನ್ನು ಉನ್ನತೀಕರಣ ಮಾಡಲು ಟಾಟಾ ಟೆಕ್ನಾಲಜೀಸ್‌ ಜತೆ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ. ಹೀಗಾಗಿ ಇನ್ನು ಮುಂದೆ ಐಟಿಐ ವಿದ್ಯಾರ್ಥಿಗಳು ಆಕ್ಸಿಜನ್‌ ಘಟಕಗಳನ್ನು ನಿರ್ವಹಿಸುವುದು ಮಾತ್ರವಲ್ಲ, ಆಕ್ಸಿಜನ್‌ ತಯಾರಿಕಾ ಯಂತ್ರಗಳನ್ನು ತಯಾರಿಸುವ ಕುಶಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ಮಾಡಿದರು.
ಕೇಂದ್ರ ಸರಕಾರದ ತರಬೇತಿ ಮಹಾ ನಿರ್ದೇಶನಾಲಯ ಕೈಗೊಂಡಿರುವ ಈ ತರಬೇತಿ ಕಾರ್ಯಕ್ರಮ ಅತ್ಯುತ್ತಮ ಕ್ರಮವಾಗಿದೆ ಎಂದ ಡಿಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಮಾನವ, ವನ್ಯಜೀವಿ ಸಂಘರ್ಷದ ಬಗ್ಗೆ ಕೇಂದ್ರ ಸಚಿವರ ಜತೆ ಎಚ್‌ಡಿಕೆ ಮಹತ್ವದ ಚರ್ಚೆ

ಸಂಸತ್ ನ ಹೊರಗೆ ರಾಹುಲ್ ಗಾಂಧಿ, ಸಂಸದ ರವನೀತ್ ಸಿಂಗ್ ಬಿಟ್ಟು ವಾಗ್ಯುದ್ಧ video

ಶಬರಿಮಲೆ ಚಿನ್ನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಅಮೆರಿಕಾ ಜೊತೆಗಿನ ಒಪ್ಪಂದದಿಂದ ಭಾರತದ ರೈತರಿಗೆ ಹೊಡೆತವೇ: ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಮಹತ್ವದ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments