Select Your Language

Notifications

webdunia
webdunia
webdunia
webdunia

ನೀವೇ ಎಲ್ಲವನ್ನು ಸೃಷ್ಟಿ ಮಾಡುತ್ತಿರಿ ಮಾಧ್ಯಮಗಳ ವಿರುದ್ಧ ಸಿಎಂ ಕಿಡಿ

ನೀವೇ ಎಲ್ಲವನ್ನು ಸೃಷ್ಟಿ ಮಾಡುತ್ತಿರಿ ಮಾಧ್ಯಮಗಳ ವಿರುದ್ಧ ಸಿಎಂ ಕಿಡಿ
ಬೆಂಗಳೂರು , ಶುಕ್ರವಾರ, 29 ಏಪ್ರಿಲ್ 2016 (12:14 IST)
ನೀವೇ ಎಲ್ಲವನ್ನು ಸೃಷ್ಟಿ ಮಾಡಿ ಪ್ರಚಾರ ಮಾಡುತ್ತೀರಿ ಎಂದು ಮಾಧ್ಯಮಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
 
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹಿರಿಯ ಕಾಂಗ್ರೆಸ್ ಮುಖಂಡರು. ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೋ ಗೊತ್ತಿಲ್ಲ. ಪಕ್ಷದ ಹಿರಿಯ ಮುಖಂಡರಾಗಿದ್ದರಿಂದ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದರಲ್ಲಿ ಯಾವ ತಪ್ಪಿದೆ ಎಂದು ತಿರುಗೇಟು ನೀಡಿದರು.
 
ಎಸ್.ಎಂ.ಕೃಷ್ಣ ದೆಹಲಿಗೆ ಯಾಕೆ ತೆರಳಿದ್ದಾರೋ ಗೊತ್ತಿಲ್ಲ. ಬೇಕಾದ್ರೆ ಅವರನ್ನೇ ಕೇಳಿ ನನ್ನ ಕೇಳಿದ್ರೆ ನೋ ರಿಯಾಕ್ಷನ್ ಎಂದು ತಿಳಿಸಿದ್ದಾರೆ
 
ಮುಖ್ಯಮಂತ್ರಿಗಳ ಬದಲಾವಣೆಯಾಗಲಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಇಂತಹ ಮಾಧ್ಯಮಗಳ ಸೃಷ್ಟಿಯನ್ನಿಟ್ಟುಕೊಂಡು ವಿಪಕ್ಷಗಳು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಮಾಧ್ಯಮಗಳು ಗಾಳಿ ಸುದ್ದಿಗಳಿಗೆ ಪ್ರಚಾರ ನೀಡುವುದು ಸರಿಯಲ್ಲ . ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಿಲ್ಲ. ನಾನೇ ಸಂಪೂರ್ಣ ಅಧಿಕಾರವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮತ್ತೆ 3 ನೂತನ ಮೆಡಿಕಲ್ ಕಾಲೇಜುಗಳು: ಸಚಿವ ಪಾಟೀಲ್