ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನಿರಂಜನಕುಮಾರ್ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದರಿಂದ ಅವರನ್ನು ಗೆಲ್ಲಿಸುವುದು ನಮ್ಮ ಛಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ,
ಸುತ್ತೂರು ಶ್ರೀಗಳು ನಮ್ಮ ಪಕ್ಷದ ಅಭ್ಯರ್ಥಿಗೂ ಆಶೀರ್ವದಿಸಿದ್ದಾರೆ. ಅವರು ಪ್ರತಿಯೊಬ್ಬರಿಗೂ ಆಶೀರ್ವದಿಸುತ್ತಾರೆ. ಆದರೆ, ಇಂತಹ ವ್ಯಕ್ತಿಗೆ ಮತ ಹಾಕಿ ಎಂದು ಯಾವತ್ತೂ ಹೇಳುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ದಿವಂಗತ ಮಾಜಿ ಸಚಿವ ಮಹಾದೇವ ಪ್ರಸಾದ್ ನಿಧನವಾದಾಗ ಅವರ ಮನೆಗೆ ಹೋಗಿದ್ದು ನಿಜ. ಎರಡು ನಿಮಿಷ ಅನುಕಂಪ ತೋರಿ ಬಂದಿದ್ದೇನೆ. ಆದರೆ, ಅವರ ಹೇಳಿದಂತೆ ನಾನು ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದು ಉಪಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.