Webdunia - Bharat's app for daily news and videos

Install App

ಕೆರೆ ಡಿನೋಟಿಫೈ, ಇದೊಂದು ನಾಚಿಕೆಗೇಡಿನ ಸರಕಾರ: ಕುಮಾರಸ್ವಾಮಿ

Webdunia
ಬುಧವಾರ, 19 ಜುಲೈ 2017 (19:57 IST)
ರಾಜ್ಯದಲ್ಲಿ ಒಣಗಿದ ಕೆರೆಗಳನ್ನು ಡಿನೋಟಿಫೈ ಮಾಡುವ ಸರಕಾರದ ನಿರ್ಧಾರ ನಾಚಿಕೆಗೇಡು ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
 
ಹಿರಿಯ, ಅನುಭವಿ ನಾಯಕರಾದ ಸಚಿವ ಕಾಗೋಡು ತಿಮ್ಮಪ್ಪ ಅವರಿಂದ ಇಂತಹ ನಿರ್ಧಾರ ನಾನು ನಿರೀಕ್ಷಿಸಿರಲಿಲ್ಲ. ಕೆರೆಗಳನ್ನು ಪುನರ್ಜಿವಗೊಳಿಸುವುದು ಬಿಟ್ಟು ಲೇಔಟ್‌ಗಳನ್ನಾಗಿ ಮಾಡಿದಲ್ಲಿ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.
 
ಕೆರೆಗಳನ್ನು ಲೇಔಟ್ ಮಾಡಬೇಕಾಗಿದ್ದಲ್ಲಿ ರಾಜಕಾಲುವೆ ಒತ್ತುವರಿ ಏಕೆ ತೆರುವುಗೊಳಿಸಬೇಕಿತ್ತು. ಸರಕಾರ ಕೆರೆಗಳನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.
 
ಒಣಗಿದ ಕೆರೆಗಳನ್ನು ಲೇಔಟ್‌ಗಳನ್ನು ಮಾಡಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ಮಾಡಿಕೊಂಡುವ ಹುನ್ನಾರವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಲೇಔಟ್‌ಗಳನ್ನು ನಿರ್ಮಿಸಲು ಕೆರೆಗಳನ್ನು ನಾಶಪಡಿಸಲಾಗುತ್ತಿದೆ. ಕೆರೆ ಡಿನೋಟಿಫೈಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಒಂದು ವೇಳೆ ಸರಕಾರ ಡಿನೋಟಿಫೈಗೆ ಮುಂದುವರಿದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments