Select Your Language

Notifications

webdunia
webdunia
webdunia
webdunia

ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ: ಸಿಎಂ

ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ: ಸಿಎಂ
ನಂಜನಗೂಡು , ಶನಿವಾರ, 1 ಏಪ್ರಿಲ್ 2017 (15:20 IST)
ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ವದಂತಿ, ಇದು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ರೈಲ್ವೆ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ  ವರದಿಗಳ ಸತ್ಯಕ್ಕೆ ದೂರವಾಗಿವೆ ಎಂದರು.
 
ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರು ಬಿಜೆಪಿ ಸೇರುವುದಿಲ್ಲ. ಅದೊಂದು ಕೋಮುವಾದಿಗಳ, ಭ್ರಷ್ಟಾಚಾರಿಗಳ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಬಗ್ಗೆ ಪ್ರತಿಕ್ರಿಯೆ ನೀಡಲಾರೆ.ಯಾರೂ ಸಹ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

`ತಂದೆಗೇ ದ್ರೋಹ ಮಾಡಿದವನು ಇತರರೊಡನೆ ಸ್ನೇಹದಿಂದರಲು ಸಾಧ್ಯವೇ ಇಲ್ಲ’