ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ಗೆ ಸೇರುವುದಕ್ಕೆ ಮುಂದಾಗಿದ್ದ ಹಿರಿಯ ಮುಖಂಡ ಜಾಫರ್ ಷರೀಫ್ ಈಗ ಮತ್ತೆ ಕಾಂಗ್ರೆಸ್ಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜಾಫರ್ ಷರೀಫ್ ಅವರಿಗೆ ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಟಿಕೆಟ್ ನಿರಾಕರಿಸಿ ರಿಜ್ವಾನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಟಿಕೆಟ್ ಸಿಗದಿದ್ದರಿಂದ ತೀವ್ರ ನಿರಾಶರಾಗಿದ್ದ ಷರೀಫ್ ಜೆಡಿಎಸ್ ಮುಖಂಡ ದೇವೇಗೌಡರನ್ನು ಭೇಟಿ ಮಾಡಿ ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು.
ಮೆಕ್ಕಾ ಯಾತ್ರೆಗೆ ಹೋಗಿ ಬಂದ ನಂತರ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದ ಜಾಫರ್ ಷರೀಫ್ ಮೆಕ್ಕಾದಿಂದ ಬಂದ ನಂತರ ಜೆಡಿಎಸ್ಗೆ ಸೇರುವ ತಮ್ಮ ನಿರ್ಧಾರ ಬದಲಿಸಿದ್ದರು. ಆದರೆ ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವುದರಿಂದ ಈಗ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ.